ಆಲಮಟ್ಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಕೂಲಿ ಕೆಲಸದೊಂದಿಗೆ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಿ ಎಂದು ತಾಲ್ಲೂಕು ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಂಯೋಜಕ ದಸ್ತಗೀರ್ ಗುಡಿಹಾಳ ಹೇಳಿದರು.
ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಮಟ್ಟಿ ಗ್ರಾಮದ ಸಿದ್ರಾಮ ಗಣಾಚಾರಿ ಹೊಲದಿಂದ ಬಡಗೇರ ಹೊಲದ ವರೆಗೆ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ರೋಜ್ ಗಾರ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಈ ವೇಳೆ ಕಾರ್ಮಿಕರು ತಮಗೆ ನಿರಂತರ ಕೆಲಸ ನೀಡುವಂತೆ ಹೇಳಿಕೊಂಡರು. ಅಲ್ಲದೇ ಮಹಿಳಾ ಕೂಲಿಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅವರಲ್ಲಿದ್ದ ಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರ ಕ್ರಮ ತಿಳಿಸಲಾಯಿತು. ಶಂಕರ್ ವಡ್ಡರ್ , ಕೂಲಿಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಸಿಂದಗಿ: ಮುಖ್ಯ ಶಿಕ್ಷಕ ಆತ್ಮಹತ್ಯೆ; ಅಧಿಕಾರಿಗಳ ಧೋರಣೆ ಖಂಡನೆ

ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ…

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಕತ್ತಲೆ ಸೀಳಿ ಬೆಳಕು ಮೂಡಿಸಿದ ಸ್ವರಾಜ್ಯ ಸೂರ್ಯ ಗಾಂಧಿ: ಡಾ. ಸವಿತಾ ದೇಸಾಯಿ

ನಿಡಗುಂದಿ : ಲೋಕಮಾನ್ಯ ತಿಲಕರು ತೀರಿದ ನಂತರ ಸ್ವಾತಂತ್ರ್ಯ ಸಂಗ್ರಾಮದ ಬಾನಂಗಳದಲ್ಲಿ ಕವಿದಿದ್ದ ಕತ್ತಲನ್ನು ಸತ್ಯ,…

ಸಿದ್ದನಾಥ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉತ್ತರಪ್ರಭ ಸದ್ದಿಆಲಮಟ್ಟಿ: ಇಲ್ಲಿಗೆ ಸಮೀಪದ ಸಿದ್ದನಾಥ ಸಕಾ೯ರಿ ಪ್ರೌಢಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಅಮೃತೋತ್ಸವ ಸೋಮವಾರ…