ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23 ನೇ ಸಾಲಿನ ಜಿಲ್ಲಾ ಮಟ್ಟದ  ಪಂದ್ಯಾವಳಿ ಪ್ರಶಸ್ತಿ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಈಚೆಗೆ ಈ ಶಾಲಾ ತಂಡ ವಿಜಯಪುರ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನದೊಂದಿಗೆ ಜಯ ಸಾಧಿಸಿದೆ. ವಿಭಾಗ ಮಟ್ಟದ ಪಂದ್ಯಾವಳಿಗೆ ವಿಜಯಪುರ ಜಿಲ್ಲೆಯಿಂದ ಈ ವಿಜೇತ ತಂಡ ಪ್ರತಿನಿಧಿಸಲಿದೆ. 

       ನಾಯಕಿ ಪ್ರಿಯಾಂಕಾ ಶಿವಣಗಿ ನೇತೃತ್ವದ ತಂಡದಲ್ಲಿ ಅನುಷಾ ಗುಳೇದಗುಡ್ಡ, ಸಂಜನಾ ಬಿಂಗಿ, ಸೇವಂತಿ ರಾಠೋಡ, ಹೇಮಾ ಹತ್ತರಕಿಹಾಳ, ಚಂದ್ರಕಲಾ ಹತ್ತರಕಿಹಾಳ, ಕೀತಿ೯ ಲಮಾಣಿ ಕ್ರೀಡಾ ಬಾಲೆಯರಿದ್ದರು. ಕವಿತಾ ಮಠದ ತಂಡದ ವ್ಯವಸ್ಥಾಪಕರಾಗಿದ್ದು ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಚ್.ನಾಗಣಿ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿದ್ದಾರೆ. 

       ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಅಭೂತಪೂರ್ವ ಕ್ರೀಡಾ ಕೌಶಲ್ಯ ತೋರಿ ವಿಭಾಗ ಮಟ್ಟಕ್ಕೆ ಆಯ್ಕೆಗೊಳ್ಳುವ ಮೂಲಕ ಸಂಸ್ಥೆಗೆ, ಶಾಲೆಗೆ ಹಾಗು ಆಲಮಟ್ಟಿ ಗ್ರಾಮಕ್ಕೆ ಕೀತಿ೯ ತಂದಿರುವ ಕ್ರೀಡಾಪಟು ಬಾಲೆಯರನ್ನು ಶಾಲೆಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಈ ತಂಡದ ಬಾಲೆಯರು ನಡೆಸಿದ ಸಾಂಘಿಕ ಹೋರಾಟದ ಫಲ ಗೆಲುವು ಸಾಧಿಸಿತು. ತಾಲೂಕು ಹಾಗು ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ನಿರಂತರ ಗಮನಾರ್ಹ ಸಾಧನೆ ಮೆರೆದು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಯ ಈ ಕ್ರೀಡಾ ಬಾಲಕಿಯರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಸೇರಿದಂತೆ ಶಾಲಾ ಸಿಬ್ಬಂದಿ, ಕ್ರೀಡಾ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಇಂದು ಸಾರಿಗೆ ಸಚಿವರ ಗದಗ ಜಿಲ್ಲಾ ಪ್ರವಾಸ

ಉತ್ತರಪ್ರಭಗದಗ: ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ…

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.