ಉತ್ತರಪ್ರಭ ಸುದ್ದಿ,

ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ 43 ಲಕ್ಷ ರೂಪಾಯಿ ಹಣ ಸಾಲ ಪಡೆದಿದ್ದ ಮಾಜಿ ನಗರಸಭೆ ಉಪಾಧ್ಯಕ್ಷ ಪ್ರಕಾಶ್ ಬಾಕಳೆ ಅವರ ಪುತ್ರ ದತ್ತಾತ್ರೇಯ ಬಾಕಳೆ ಸೇರಿದಂತೆ 17 ಜನರ ವಿರುದ್ಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದ್ದಾರೆ. ಶುಕ್ರವಾರ ನಗರದ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗದಗ ಬೆಟಗೇರಿ ನಗರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ್ ಬಾಕಳೆ ಮಗ ದತ್ತಾತ್ರೇಯ ಬಾಕಳೆ, ಇದೇ ವರ್ಷದ ಏಪ್ರಿಲ್ ತಿಂಗಳಿಂದ ಜೂನ್ ವರೆಗೆ ದತ್ತಾತ್ರೇಯ ಸಹಚರರ ಹೆಸರಲ್ಲಿ ಬ್ಯಾಂಕ್ ನಲ್ಲಿ ನಕಲಿ ಚಿನ್ನದ ಆಭರಣ ಅಡವಿಟ್ಟಿದ್ದ ಹಾಗೂ ಗದಗ ಸ್ಟೇಷನ್ ರೋಡ ವಿಮಲೇಶ ಜ್ಯುವೆಲರ್ ಇವರೆಲ್ಲರೂ ಸೇರಿಸಿಕೊಂಡು ತಮ್ಮ ಬಳಿ ಇರುವ ಆಭರಣಗಳಿಗೆ ಮೇಲೆ ಸ್ವಲ್ಪ ಪ್ರಮಾಣದ ಬಂಗಾರದ ಲೇಪನ ಇದ್ದು, ಒಳಗಡೆ ಬೇರೆ ಲೋಹ ಇದೆ ಅಂತಾ ಗೊತ್ತಿದ್ದೂ, ಇವು ಸಂಪೂರ್ಣ ಬಂಗಾರದ ಆಭರಣಗಳು ಅಂತಾ ಸುಳ್ಳು ಹೇಳಿ ಅವುಗಳನ್ನು ಅಡವಿಟ್ಟು ಸಾಲ ಪಡೆಯುವ ಬಗ್ಗೆ ಒಳಸಂಚು ಮಾಡಿ ನಂತರ ಗದಗ ಶಹರದ ಭೂಮರಡ್ಡಿ ಸರ್ಕಲ ಹತ್ತಿರವಿರುವ ಯೂನಿಯನ್‌ ಬ್ಯಾಂಕದಲ್ಲಿ ಮೇಲೆ ನಮೂದ ಮಾಡಿದ ಎಲ್ಲರೂ ಸೇರಿ ಒಟ್ಟು 4983.2 ಗ್ರಾಂ ತೂಕದ ಬಂಗಾರದ ಲೇಪನವಿರುವ ಬ್ರಾಸಲೇಟ್‌, ಬೆಂಗಲ್ಸ್ ಹಾಗೂ ಚೈನ್‌ಗಳನ್ನು ಅಡವಿಟ್ಟು ಒಟ್ಟು 1,43,34 ಲಕ್ಷ(1 ಕೋಟಿ 43 ಲಕ್ಷದ 34 ಸಾವಿರದ) ರೂ.ಗಳ ಸಾಲ ಪಡೆದು ಬ್ಯಾಂಕಿಗೆ ಮೋಸ ಮಾಡಿದ್ದಾರೆ ಎಂದರು.

ಆರೋಪಿ ದತ್ತಾತ್ರೇಯ ಬಾಕಳೆ, ಬ್ಯಾಂಕ್ ನಲ್ಲಿನ ಚಿನ್ನ ಚೆಕ್ ಮಾಡುವ ಸುರೇಶ್ ರೇವಣಕರ ಅವರ ಸಹಾಯ ಪಡೆದು ವಂಚನೆ ಮಾಡಿದ್ದ. ದತ್ತಾತ್ರೇಯ ಆ್ಯಂಡ್ ಟೀಮ್ ತರುತ್ತಿದ್ದ ನಕಲಿ ಚಿನ್ನಕ್ಕೆ 22 ಕ್ಯಾರೆಟ್ ಚಿನ್ನ ಅಂತಾ ಸುರೇಶ್ ಸರ್ಟಿಫಿಕೇಟ್ ಕೊಡ್ತಿದ್ರಂತೆ. ಪ್ರಮಾಣ ಪತ್ರ ಪಡೆದು ಎರಡು ತಿಂಗಳ ಅಂತರದಲ್ಲಿ ಬೇರೆ ಬೇರೆ ಹೆಸರಲ್ಲಿ ಒಟ್ಟು 4,871.04 (4 ಕೆಜಿ 87.04) ಗ್ರಾಂ ನಕಲಿ ಚಿನ್ನವನ್ನ ಅಡ ಇರಿಸಲಾಗಿತ್ತು.. ಚಿನ್ನ ಅಡಮಾನವಿಟ್ಟು ಬರೋಬ್ಬರಿ 1 ಕೋಟಿ 43 ಲಕ್ಷ 34 ಸಾವಿರ ರೂಪಾಯಿಯನ್ನ ಸಾಲದ ರೂಪದಲ್ಲಿ ಪಡೆಯಲಾಗಿತ್ತು..

ಪ್ರಕರಣ ಸಂಬಂಧ ಬೆಟಗೇರಿ ಬಡಾವಣೆಯಲ್ಲಿ ಕೇಸ್ ದಾಖಲಾಗಿದ್ದು, ವಂಚನೆ ಸಹಕಾರ ನೀಡಿದ್ದ ಬ್ಯಾಂಕ್ ನ ಚಿನ್ನ ಚೆಕ್ ಮಾಡುತ್ತಿದ್ದ ಸುರೇಶ್ ರೇವಣಕರ, ದತ್ತಾತ್ರೇಯ ಬಾಕಳೆ, ಅರಣ್ ಕುಮಾರ್, ಆದಿಲ್ ನಿಶಾನಿ, ರವಿ ಹತ್ತರಕಲ್, ಗಣೇಶ ಮಾದರ, ಮಾಣಿಕ್ ಲಕ್ಕುಂಡಿ, ದಾನೇಶ್ ಉಮಾದಿ, ರಾಕೇಶ್ ನವಲಗುಂದ, ಮಂಜುನಾಥ ಹೊಸಮನಿ, ಸುಚೀತಕುಮಾರ ಹರಿವಾಣ, ದುಂಡಪ್ಪ ಕೊಟ್ಟೂರುಶೆಟ್ಟರ್, ಸಿದ್ಧಾರ್ಥ್ ಭರಡಿ, ನಾಗರಾಜ ರಾಮಗಿರಿ, ಅರುಣಕುಮಾರ ಹೂಗಾರ, ಸಚಿನ್ ಹರಿವಾಣ, ಸಂತೋಷ ವೀರಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಿದರು. ನಕಲಿ ಚಿನ್ನಾಭರಣ ಎಲ್ಲಿಂದ ಖರೀದಿ ಮಾಡಿದರು. ಆರೋಪಿಗಳಿಂದ ಎಷ್ಟು ಹಣ ಸೀಜ್ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಮುಂದಿನ ತನಿಖೆಯ ನಂತರ ತಿಳಿದು ಬರಲಿದೆ. ಈ ಪ್ರಕರಣವನ್ನ ಗಂಭೀರವಾಗಿ ಆರೋಪಿತರ ಪತ್ತೆ ಕುರಿತು ಡಿಎಸ್ ಪಿ ಗದಗ ಉಪ-ವಿಭಾಗ, ಗದಗ ರವರ ಮಾರ್ಗದರ್ಶನದಲ್ಲಿ. ಸಿಪಿಐ ಬೆಟಗೇರಿ ವೃತ್ತ ರವರ ನೇತೃತ್ವಲ್ಲಿ ಪಿಎಸ್‌ಐ ಬೆಟಗೇರಿ ಬಡಾವಣೆ ಹಾಗೂ 6 ಜನ ಸಿಬ್ಬಂದಿ ಜನರು ಸೇರಿದಂತೆ ಒಂದು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಕರ್ತವ್ಯ ನಿರತ ಸಾರಿಗೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವವರ ಮೇಲೆ ಕ್ರಮಕ್ಕೆ ಗದಗ ಡಿಸಿ ಸೂಚನೆ!

ವಾಕರಾರಸಾ ಸಂಸ್ಥೆಯ ನಿರ್ವಾಹಕರು ಹಾಗೂ ಚಾಲಕರು ಮತ್ತು ಸಿಬ್ಬಂದಿಗಳು ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕರಿಗೆ ಸಂಚರಿಸಲು ತೊಂದರೆಯಾಗುತ್ತಿದೆ. ಕನಿಷ್ಟ ದರದಲ್ಲಿ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ನೂತನ ಗದಗ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ..!

ಉತ್ತರಪ್ರಭ, ಗದಗ :ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ಇವರನ್ನು ತಕ್ಷಣವೆ ಜಾರಿಬರುವಂತೆ ರಾಜ್ಯ ಸರ್ಕಾರ…

ಆನ್ ಲೈನ್ ಶಿಕ್ಷಣ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್…

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.