ಉತ್ತರಪ್ರಭ ಸುದ್ದಿ
ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ ಸಂಘ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ವಿಜಯಕುಮಾರ ಸುಂಕದ ಹೇಳಿದರು.

ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಡೆದ ರೈತ ಸಂಘ ಗ್ರಾಮ ಘಟಕದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ, ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತ ವಿರೋಧಿ ಕಾನೂನುಗಳನ್ನ ಸರ್ಕಾರಗಳು ರದ್ದು ಮಾಡಬೇಕು. ಪ್ರತಿಯೊಂದು ಗ್ರಾಮದ ಮನೆ ಮನೆಯಲ್ಲೂ ರೈತರು ಜಾಗೃತರಾಗಿ, ಅನ್ಯಾಯದ ವಿರುದ್ದ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟಿ ಸಿದ್ದವೀರಪ್ಪ ಮಾತನಾಡಿ, ರೈತ ಬೆವರುಹರಿಸಿ ದುಡಿದರು ಯೋಗ್ಯ ಬೆಲೆ ಸಿಗುತ್ತಿಲ್ಲ ಆದರೂ ಆತ ನಿಸ್ವಾರ್ಥಿ. ಒಗ್ಗಟ್ಟಿನಲ್ಲಿ ಬಲವಿದೆ ಸಮಾಜದಲ್ಲಿ ಬೇಕು ಬೇಡಗಳ ಈಡೆರಿಕೆಗೆ ಸಂಘಟಿತ ಹೋರಾಟ ಅಗತ್ಯವಿದೆ. ನಾವು ಬೆಳೆದ ಬೆಳೆಗೆ ನಾವೇ ಬೆಲೆ ನಿಗಧಿ ಮಾಡುವ ಕಾನೂನು ಜಾರಿಯಾಗಬೇಕು. ರೈತರ ಹಿತರಕ್ಷಣೆ ಕಾಪಾಡುವ ಧ್ವನಿಯಾಗಿ ರೈತ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಎಂದು ಕರೆ ನೀಡಿದರು.
ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಬಾಳಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ,ಜನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ, ತಾಲೂಕ ಘಟಕದ ಅಧ್ಯಕ್ಷ ಮಂಜುನಾಥ ಗೋಡೆ,ಮುಖಂಡರಾದ ಅಪ್ಪಣ್ಣ ಭಂಗಿ,ಹನಮಂತಪ್ಪ ಈಳಗೇರ,ಬಸಪ್ಪ ಕರಿಗಾರ,ಬಿ.ಆರ್.ರಾಠೋಡ,ಅಂದಪ್ಪ ಚಿಂಚಲಿ,ಅಕ್ಕಮಹಾದೇವಿ ಹೊಸಮನಿ,ಮೋದಿನಸಾಬ ಬುಕಿಟಗಾರ,ಪ್ರಭಪ್ಪ ದುಗಾಣಿ ಹಾಗೂ ವಿವಿಧ ಗ್ರಾಮಗಳ ರೈತ ಸಂಘದ ಪದಾಧಿಕಾರಿಗಳು ಇದ್ದರು.