ಉತ್ತರಪ್ರಭ ಸುದ್ದಿ

ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ ಸಂಘ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ವಿಜಯಕುಮಾರ ಸುಂಕದ ಹೇಳಿದರು.

ಮುಳಗುಂದ ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆದ ಗ್ರಾಮ ಘಟಕದ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿದರು.

ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಡೆದ ರೈತ ಸಂಘ ಗ್ರಾಮ ಘಟಕದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ, ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತ ವಿರೋಧಿ ಕಾನೂನುಗಳನ್ನ ಸರ್ಕಾರಗಳು ರದ್ದು ಮಾಡಬೇಕು. ಪ್ರತಿಯೊಂದು ಗ್ರಾಮದ ಮನೆ ಮನೆಯಲ್ಲೂ ರೈತರು ಜಾಗೃತರಾಗಿ, ಅನ್ಯಾಯದ ವಿರುದ್ದ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟಿ ಸಿದ್ದವೀರಪ್ಪ ಮಾತನಾಡಿ, ರೈತ ಬೆವರುಹರಿಸಿ ದುಡಿದರು ಯೋಗ್ಯ ಬೆಲೆ ಸಿಗುತ್ತಿಲ್ಲ ಆದರೂ ಆತ ನಿಸ್ವಾರ್ಥಿ. ಒಗ್ಗಟ್ಟಿನಲ್ಲಿ ಬಲವಿದೆ ಸಮಾಜದಲ್ಲಿ ಬೇಕು ಬೇಡಗಳ ಈಡೆರಿಕೆಗೆ ಸಂಘಟಿತ ಹೋರಾಟ ಅಗತ್ಯವಿದೆ. ನಾವು ಬೆಳೆದ ಬೆಳೆಗೆ ನಾವೇ ಬೆಲೆ ನಿಗಧಿ ಮಾಡುವ ಕಾನೂನು ಜಾರಿಯಾಗಬೇಕು. ರೈತರ ಹಿತರಕ್ಷಣೆ ಕಾಪಾಡುವ ಧ್ವನಿಯಾಗಿ ರೈತ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಎಂದು ಕರೆ ನೀಡಿದರು.

ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಬಾಳಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ,ಜನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ, ತಾಲೂಕ ಘಟಕದ ಅಧ್ಯಕ್ಷ ಮಂಜುನಾಥ ಗೋಡೆ,ಮುಖಂಡರಾದ ಅಪ್ಪಣ್ಣ ಭಂಗಿ,ಹನಮಂತಪ್ಪ ಈಳಗೇರ,ಬಸಪ್ಪ ಕರಿಗಾರ,ಬಿ.ಆರ್.ರಾಠೋಡ,ಅಂದಪ್ಪ ಚಿಂಚಲಿ,ಅಕ್ಕಮಹಾದೇವಿ ಹೊಸಮನಿ,ಮೋದಿನಸಾಬ ಬುಕಿಟಗಾರ,ಪ್ರಭಪ್ಪ ದುಗಾಣಿ ಹಾಗೂ ವಿವಿಧ ಗ್ರಾಮಗಳ ರೈತ ಸಂಘದ ಪದಾಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ತಂಬಾಕು ತೀಟೆ ದಾಸರಾದರೆ ಬಾಳೆಲ್ಲ ಗೋಳು-ಶಶಿಕಾಂತ ಕುಮಟಿಹಳ್ಳಿ

ಹೂಲಗೇರಿ: ತಂಬಾಕು ನಿರ್ಮೂಲನಾ ಜಾಗೃತಿ ದಿನಾಚರಣೆ ಕೆರೂರ ( ಬಾಗಲಕೋಟೆ ಜಿಲ್ಲೆ)ಎಲ್ಲ ಭಾಗ್ಯಗಳಲ್ಲೇ ಆರೋಗ್ಯ ಭಾಗ್ಯವೇ…

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.