ಉತ್ತರಪ್ರಭ ಸುದ್ದಿ

ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ ಸಂಘ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ವಿಜಯಕುಮಾರ ಸುಂಕದ ಹೇಳಿದರು.

ಮುಳಗುಂದ ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆದ ಗ್ರಾಮ ಘಟಕದ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿದರು.

ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಡೆದ ರೈತ ಸಂಘ ಗ್ರಾಮ ಘಟಕದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ, ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತ ವಿರೋಧಿ ಕಾನೂನುಗಳನ್ನ ಸರ್ಕಾರಗಳು ರದ್ದು ಮಾಡಬೇಕು. ಪ್ರತಿಯೊಂದು ಗ್ರಾಮದ ಮನೆ ಮನೆಯಲ್ಲೂ ರೈತರು ಜಾಗೃತರಾಗಿ, ಅನ್ಯಾಯದ ವಿರುದ್ದ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟಿ ಸಿದ್ದವೀರಪ್ಪ ಮಾತನಾಡಿ, ರೈತ ಬೆವರುಹರಿಸಿ ದುಡಿದರು ಯೋಗ್ಯ ಬೆಲೆ ಸಿಗುತ್ತಿಲ್ಲ ಆದರೂ ಆತ ನಿಸ್ವಾರ್ಥಿ. ಒಗ್ಗಟ್ಟಿನಲ್ಲಿ ಬಲವಿದೆ ಸಮಾಜದಲ್ಲಿ ಬೇಕು ಬೇಡಗಳ ಈಡೆರಿಕೆಗೆ ಸಂಘಟಿತ ಹೋರಾಟ ಅಗತ್ಯವಿದೆ. ನಾವು ಬೆಳೆದ ಬೆಳೆಗೆ ನಾವೇ ಬೆಲೆ ನಿಗಧಿ ಮಾಡುವ ಕಾನೂನು ಜಾರಿಯಾಗಬೇಕು. ರೈತರ ಹಿತರಕ್ಷಣೆ ಕಾಪಾಡುವ ಧ್ವನಿಯಾಗಿ ರೈತ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಎಂದು ಕರೆ ನೀಡಿದರು.

ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಬಾಳಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ,ಜನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ, ತಾಲೂಕ ಘಟಕದ ಅಧ್ಯಕ್ಷ ಮಂಜುನಾಥ ಗೋಡೆ,ಮುಖಂಡರಾದ ಅಪ್ಪಣ್ಣ ಭಂಗಿ,ಹನಮಂತಪ್ಪ ಈಳಗೇರ,ಬಸಪ್ಪ ಕರಿಗಾರ,ಬಿ.ಆರ್.ರಾಠೋಡ,ಅಂದಪ್ಪ ಚಿಂಚಲಿ,ಅಕ್ಕಮಹಾದೇವಿ ಹೊಸಮನಿ,ಮೋದಿನಸಾಬ ಬುಕಿಟಗಾರ,ಪ್ರಭಪ್ಪ ದುಗಾಣಿ ಹಾಗೂ ವಿವಿಧ ಗ್ರಾಮಗಳ ರೈತ ಸಂಘದ ಪದಾಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

You May Also Like

ಗೋರ ಸೇನಾ ಸಂಘಟನೇ ವತಿಯಿಂದ ಪ್ರತಿಭಟನೆ- ಸಂಗೂರ ಸಕ್ಕರೆ ಕಾರ್ಖಾನೆ:ಲಾರಿ ಹಾಯ್ದು ಒರ್ವ ಕಾರ್ಮೀಕ ಸಾವೂ, ಇಬ್ಬರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಹಾವೇರಿ: ಹಾವೇರಿ ಜಿಲ್ಲೆಯ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ದಿನಾಂಕ:09.01.2022 ರಾತ್ರಿ 2.00 ಗಂಟೆ…

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.