ಉತ್ತರಪ್ರಭ ಸುದ್ದಿ

ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ ನೈತಿಕತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪುರ ಅವರು ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಉಪ ಚುನಾವಣೆಯಲ್ಲಿ ಪ್ರತಾಪಗೌಡ ಸೋಲಿಗೆ ಕೆ.‌ಶಿವನಗೌಡ ನಾಯಕರೇ ಕಾರಣ ಎಂದು ಪ್ರತಾಪಗೌಡ ಹೇಳಿಕೆ‌ ನೀಡಿರುವುದು ಖಂಡನೀಯವಾಗಿದೆ. ತಾವು ಮೂರು ಭಾರಿ ಶಾಸಕರಾಗಿದ್ದ ಅವಧಿಯಲ್ಲಿ ಸರಿಯಾಗಿ ಆಡಳಿತ ನೀಡದೇ, ಪಕ್ಷದ ಕಾರ್ಯಕರ್ತರ ಕಾಳಜಿ ವಹಿಸದ ಪರಿಣಾಮವಾಗಿ ಸೋಲು ಅನುಭವಿಸಿದ್ದಾರೆ, ಹೊರತು ದೇವದುರ್ಗ ಶಾಸಕ ಶಿವನಗೌಡ ಕಾರಣವಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಕ್ಷೇತ್ರದ ಜನತೆ ಪ್ರತಾಪಗೌಡ ಪಾಟೀಲ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದರು, ಅಧಿಕಾರ ಅವಧಿಯನ್ನು ಅನುಭವಿಸದೇ ಜನರ ಆದೇಶವನ್ನು ಧಿಕ್ಕರಿಸಿ ಹಣದ ಆಸೆಗಾಗಿ, ಅಧಿಕಾರದ ಹಪಾಹಪಿಗಾಗಿ ಮರಳಿ ಬಿಜೆಪಿಗೆ ಬಂದಿರುವ ಪ್ರತಾಪಗೌಡರಿಗೆ ಕ್ಷೇತ್ರದ ಮತದಾರರು ಉಪ ಚುನಾವಣೆಯಲ್ಲಿತಕ್ಕ ಪಾಠ ಕಲಿಸಿದ್ದಾರೆ, ಆದರೆ ಸೋಲಿನ ಹತಾಸೆದಿಂದಾಗಿ ಅನಗತ್ಯ ಹೇಳಿಕೆಗಳನ್ನು ಕೆ.‌ಶಿವನಗೌಡ ನಾಯಕನ ವಿರುದ್ಧ ನೀಡುವುದು ಸರಿಯಿಲ್ಲ, ಇದೇ ರೀತಿ ಹೇಳಿಕೆ ನೀಡಿದರೆ ಶಿವನಗೌಡ ಅಭಿಮಾನಿ ಬಳಗದಿಂದ ಮಸ್ಕಿಯಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆವನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೆರೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗದಗ: ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆರೆಗಳ ಸರ್ವೇ ಕಾರ್ಯವನ್ನು ಕೈಗೊಂಡು ರಾಜಕಾಲುವೆಗಳ…

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…