ಉತ್ತರಪ್ರಭ ಸುದ್ದಿ

ಗದಗ: ಅವಳಿ ನಗರದ ಸೇರಿದಂತೆ ಜಿಲ್ಲೆಯಲ್ಲಿ ತುಳಸಿ ಪೂಜಾ (ವಿವಾಹ) ಕಾರ್ಯಕ್ರಮ ಶನಿವಾರ ಸಂಜೆ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ತುಳಸಿ ಕಟ್ಟೆ ಶುಚಿಗೊಳಿಸಿ, ಬಣ್ಣ ಹಚ್ಚಲಾಯಿತು. ಕಬ್ಬು, ಮಾವಿನ ತಳಿರು- ತೋರಣ ಹಾಗೂ ಹೂ ದಂಡೆ, ಮಾಲೆಗಳೊಂದಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು.

ಮೇಣದ ಬತ್ತಿ, ಹಣತೆಯ ದೀಪಗಳಿಂದ ಆವರಣ ಬೆಳಗಿಸಲಾಗಿತ್ತು. ವಿವಿಧ ರಂಗು-ರಂಗಾದ ರಂಗವಲ್ಲಿ ಎಲ್ಲರ ಮನೆ ಮುಂದೆ ರಾರಾಜಿಸುತ್ತಿದ್ದವು. ಗಣೇಶ ಪೂಜೆ ಬಳಿಕ ಶ್ರೀಕಷ್ಣನ ಮೂರ್ತಿಗೆ ಅಭಿಷೇಕ ಪೂಜೆ ನೆರವೇರಿಸಿ, ತುಳಸಿ ಮಾತೆಗೆ ಪೂಜಿಸಲಾಯಿತು.

ದೀಪ-ಧೂಪ, ತುಪ್ಪದಾರುತಿ ಬೆಳಗಿ, ರಾಧಾ- ಕೃಷ್ಣ ಭಕ್ತಿ ಗೀತೆಗಳೊಂದಿಗೆ ಆರತಿ ಮಾಡಲಾಯಿತು. ನಗರದ ವಿವಿಧ ಕಾಲೋನಿಯಲ್ಲಿನ ಪೂಜೆಯಲ್ಲಿ ಮಹಿಳೆಯರು, ಮಕ್ಕಳು ಭಾಗವಹಿಸಿದರು.

ಅಗತ್ಯ ವಸ್ತುಗಳ ಖರೀದಿನಗರದ ಮಾರುಕಟ್ಟೆಯಲ್ಲಿ ತುಳಸಿ ಪೂಜೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿತ್ತು. ಕಬ್ಬು,ಚೆಂಡು ಹೂವು ಸೇರಿದಂತೆ ವಿವಿಧ ವಸ್ತುಗಳ ಖರೀದಿ ಮಾಡಲಾಯಿತು. ಬೆಲೆ ಏರಿಕೆ ನಡುವೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ದೃಶ್ಯ ಸಾಮಾನ್ಯವಾಗಿತ್ತು.
Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಎಂಎಲ್ ಸಿ ಹೆಚ್.ವಿಶ್ವನಾಥ್ ಮಂತ್ರಿಯಾಗುವ ಕನಸಿಗೆ: ಸುಪ್ರೀಂ ಶಾಕ್

ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…