ಉತ್ತರಪ್ರಭ ಸುದ್ದಿ

ಗದಗ: ಅವಳಿ ನಗರದ ಸೇರಿದಂತೆ ಜಿಲ್ಲೆಯಲ್ಲಿ ತುಳಸಿ ಪೂಜಾ (ವಿವಾಹ) ಕಾರ್ಯಕ್ರಮ ಶನಿವಾರ ಸಂಜೆ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ತುಳಸಿ ಕಟ್ಟೆ ಶುಚಿಗೊಳಿಸಿ, ಬಣ್ಣ ಹಚ್ಚಲಾಯಿತು. ಕಬ್ಬು, ಮಾವಿನ ತಳಿರು- ತೋರಣ ಹಾಗೂ ಹೂ ದಂಡೆ, ಮಾಲೆಗಳೊಂದಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು.

ಮೇಣದ ಬತ್ತಿ, ಹಣತೆಯ ದೀಪಗಳಿಂದ ಆವರಣ ಬೆಳಗಿಸಲಾಗಿತ್ತು. ವಿವಿಧ ರಂಗು-ರಂಗಾದ ರಂಗವಲ್ಲಿ ಎಲ್ಲರ ಮನೆ ಮುಂದೆ ರಾರಾಜಿಸುತ್ತಿದ್ದವು. ಗಣೇಶ ಪೂಜೆ ಬಳಿಕ ಶ್ರೀಕಷ್ಣನ ಮೂರ್ತಿಗೆ ಅಭಿಷೇಕ ಪೂಜೆ ನೆರವೇರಿಸಿ, ತುಳಸಿ ಮಾತೆಗೆ ಪೂಜಿಸಲಾಯಿತು.

ದೀಪ-ಧೂಪ, ತುಪ್ಪದಾರುತಿ ಬೆಳಗಿ, ರಾಧಾ- ಕೃಷ್ಣ ಭಕ್ತಿ ಗೀತೆಗಳೊಂದಿಗೆ ಆರತಿ ಮಾಡಲಾಯಿತು. ನಗರದ ವಿವಿಧ ಕಾಲೋನಿಯಲ್ಲಿನ ಪೂಜೆಯಲ್ಲಿ ಮಹಿಳೆಯರು, ಮಕ್ಕಳು ಭಾಗವಹಿಸಿದರು.

ಅಗತ್ಯ ವಸ್ತುಗಳ ಖರೀದಿನಗರದ ಮಾರುಕಟ್ಟೆಯಲ್ಲಿ ತುಳಸಿ ಪೂಜೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿತ್ತು. ಕಬ್ಬು,ಚೆಂಡು ಹೂವು ಸೇರಿದಂತೆ ವಿವಿಧ ವಸ್ತುಗಳ ಖರೀದಿ ಮಾಡಲಾಯಿತು. ಬೆಲೆ ಏರಿಕೆ ನಡುವೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ದೃಶ್ಯ ಸಾಮಾನ್ಯವಾಗಿತ್ತು.
Leave a Reply

Your email address will not be published. Required fields are marked *

You May Also Like

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಕೊವಿಡ್-19 ಸೋಂಕು ನಿಯಂತ್ರಣ: ಗದಗ ಜಿಲ್ಲೆಯಲ್ಲಿ 3 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.