ಉತ್ತರಪ್ರಭ ಸುದ್ದಿ

ಗದಗ: ಅವಳಿ ನಗರದ ಸೇರಿದಂತೆ ಜಿಲ್ಲೆಯಲ್ಲಿ ತುಳಸಿ ಪೂಜಾ (ವಿವಾಹ) ಕಾರ್ಯಕ್ರಮ ಶನಿವಾರ ಸಂಜೆ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ತುಳಸಿ ಕಟ್ಟೆ ಶುಚಿಗೊಳಿಸಿ, ಬಣ್ಣ ಹಚ್ಚಲಾಯಿತು. ಕಬ್ಬು, ಮಾವಿನ ತಳಿರು- ತೋರಣ ಹಾಗೂ ಹೂ ದಂಡೆ, ಮಾಲೆಗಳೊಂದಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು.

ಮೇಣದ ಬತ್ತಿ, ಹಣತೆಯ ದೀಪಗಳಿಂದ ಆವರಣ ಬೆಳಗಿಸಲಾಗಿತ್ತು. ವಿವಿಧ ರಂಗು-ರಂಗಾದ ರಂಗವಲ್ಲಿ ಎಲ್ಲರ ಮನೆ ಮುಂದೆ ರಾರಾಜಿಸುತ್ತಿದ್ದವು. ಗಣೇಶ ಪೂಜೆ ಬಳಿಕ ಶ್ರೀಕಷ್ಣನ ಮೂರ್ತಿಗೆ ಅಭಿಷೇಕ ಪೂಜೆ ನೆರವೇರಿಸಿ, ತುಳಸಿ ಮಾತೆಗೆ ಪೂಜಿಸಲಾಯಿತು.

ದೀಪ-ಧೂಪ, ತುಪ್ಪದಾರುತಿ ಬೆಳಗಿ, ರಾಧಾ- ಕೃಷ್ಣ ಭಕ್ತಿ ಗೀತೆಗಳೊಂದಿಗೆ ಆರತಿ ಮಾಡಲಾಯಿತು. ನಗರದ ವಿವಿಧ ಕಾಲೋನಿಯಲ್ಲಿನ ಪೂಜೆಯಲ್ಲಿ ಮಹಿಳೆಯರು, ಮಕ್ಕಳು ಭಾಗವಹಿಸಿದರು.

ಅಗತ್ಯ ವಸ್ತುಗಳ ಖರೀದಿನಗರದ ಮಾರುಕಟ್ಟೆಯಲ್ಲಿ ತುಳಸಿ ಪೂಜೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿತ್ತು. ಕಬ್ಬು,ಚೆಂಡು ಹೂವು ಸೇರಿದಂತೆ ವಿವಿಧ ವಸ್ತುಗಳ ಖರೀದಿ ಮಾಡಲಾಯಿತು. ಬೆಲೆ ಏರಿಕೆ ನಡುವೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ದೃಶ್ಯ ಸಾಮಾನ್ಯವಾಗಿತ್ತು.
Leave a Reply

Your email address will not be published. Required fields are marked *

You May Also Like

ನಾಡಿನ ಸಂಸ್ಕೃತಿ ಉಳಿಸಿ ಬೆಳಸುವಲ್ಲಿ ಕಸಾಪ ಮಹತ್ವ ಪಾತ್ರ ಹೊಂದಿದೆ

ಪಟ್ಟಣದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ 300ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು.

ಕೆಲೂರು : ಅರಣ್ಯಾಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ- ಸಚಿವ ಶ್ರೀರಾಮುಲು

ಉತ್ತರಪ್ರಭಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲರು ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ…

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ಕೋವಿಡ್-19 ನಿಯಂತ್ರಣ : ಜಿಲ್ಲೆಯಲ್ಲಿ 2 ವಾರ ಪ್ರತಿಬಂಧಕಾಜ್ಞೆ ಮುಂದುವರಿಕೆ

ಕೋವಿಡ್ -19 ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ ನಿಗದಿತ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚಾರ ನಿಷೇಧಿಸಿದೆ.