ಉತ್ತರಪ್ರಭ ಸುದ್ದಿ

ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸುರೇಶ ಈರಪ್ಪ ಮಿರ್ಜಿಯೊಂದಿಗೆ ಶೀಲವ್ವ ಸಕ್ರಪ್ಪ ಲಮಾಣಿಯವರು ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಷಯದ ಕುರಿತು ಶೀಲವ್ವ, ಸಕ್ರಪ್ಪ ಹಾಗೂ ಸುರೇಶನೊಂದಿಗೆ ಸೇರಿ ಸಂಚು ಹೂಡಿ ಸಕ್ರಪ್ಪನಿಗೆ ಕೂಲಿ ಕೆಲಸಕ್ಕೆ ತಡಸ ಗ್ರಾಮಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ.

ಅನೈತಿಕ ಸಂಬಂಧದ ಫೋಟೋ

ತಾಲೂಕಿನ ಸುವರ್ಣಗಿರಿ ತಾಂಡಾದ ಸಕ್ರಪ್ಪ ಗಂಗಪ್ಪ ಲಮಾಣಿ (40) ಈತ ಆಗಸ್ಟ್ 23ರಂದು ನಾಪತ್ತೆಯಾಗಿದ್ದಾನೆ ಸ್ವತಃ ಪತ್ನಿಯೇ ಅಕ್ಟೋಬರ್ 4ರಂದು ಲಕ್ಷೇಶ್ವರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಿಸಿದ್ದಳು.ಹಾವೇರಿ ಜಿಲ್ಲೆ ತಡಸ ಪೊಲೀಸ್ ಠಾಣೆ ವ್ಯಾಪ್ತಿಯ ಅಡವಿಸೋಮಾಪುರ ಹದ್ದಿನ ರೈತರೊಬ್ಬರ ಜಮೀನಿನ ಹತ್ತಿರದ ಕಾಲುವೆ ದಂಡೆಯ ಮೇಲೆ ಅರ್ಧಂಬಂರ್ಧ ಸುಟ್ಟ ಅನಾಮಧೇಯ ಶವ ಪತ್ತೆಯಾದ ಬಗ್ಗೆ ತಡಸ ಠಾಣೆಯಲ್ಲಿ ಆ.25ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಹತ್ಯೆಯಾದ ವ್ಯಕ್ತಿ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದ ನಿವಾಸಿ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.

ಹತ್ಯೆಯಾದ ಪತಿ

ತನಿಖೆಯಿಂದ ಸತ್ಯ ಬಯಲಿಗೆಳೆದ ಪೊಲೀಸರು ಈ ಕೃತ್ಯದಲ್ಲಿ ಪಾಲ್ಗೊಂಡ ಪತ್ನಿ ಸೇರಿ 7 ಜನರನ್ನು ಶುಕ್ರವಾರ ಬಂಧಿಸಿದ್ದಾರೆ. ಈ ಕುರಿತು ಲಕ್ಷೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಪ್ರಕರಣದ ಕೊಲೆಯಲ್ಲಿ ಅಂತ್ಯವಾಗಿರುವುದು ತಾಲೂಕಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸುವರ್ಣಗಿರಿ. ತಾಂಡಾದ ಜನರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಮೂರು ದಿನಗಳ ಕಾಲ ಇರಲಿದೆ ಭರಣಿಯ ಆರ್ಭಟ! ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಇರಲಿದೆ ಭರಣಿಯ ಆರ್ಭಟ!ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ…

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ಕೊರೊನಾ ವೈರಸ್ ತನಿಖೆಗೆ ಒಪ್ಪಿಗೆ ಸೂಚಿಸಿತೆ ಚೀನಾ?

ಕೊರೋನಾ ವೈರಸ್ ಮೂಲದ ಬಗ್ಗೆ ತನಿಖೆಗೆ ಚೀನಾ ಒಪ್ಪಿಕೊಂಡಿದೆಯೇ? ಎಂಬ ಪ್ರಶ್ನೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಿವೋ ಲಿಜಿಯಾನ್ ಪ್ರತಿಕ್ರಿಯಿಸಿದ್ದಾರೆ.