ಉತ್ತರಪ್ರಭ ಸುದ್ದಿ
ನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಬಂಡಿಯವರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಿರುವಾಗ “ಸ್ಪರ್ಧೆ ಮಾಡುತ್ತೀಯಾ ಅಂತಾ ಕೇಳಿದಾಗ ನನ್ನ ಮೇಲೆ ಜವಾಬ್ದಾರಿ ಹಾಕಿದ್ದರು, ಅದಕ್ಕೆ ನಾನು ಜನ ಈಗಾಗಲೇ ನೀನು ನಿಲ್ಲುವುದು ಬೇಡ ಅಂತಾ ಹೇಳುತ್ತಿದ್ದಾರೆ ಅಂತಾ ನಗೆ ಚಟಾಕಿ ಹಾರಿಸಿದ್ದ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರುಗಳು ಕೂಡಾ ಇದ್ದರು. ಇದೊಂದು ಅನೌಪಚಾರಿಕ ತಮಾಷೆಯ ಸಂಭಾಷಣೆಯಾಗಿದ್ದು, ಇದನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ನನಗೆ ಆಪ್ತರಾದವರೊಂದಿಗೆ ಈ ರೀತಿಯಲ್ಲಿ ಆಪ್ತತೆಯಿಂದ ತಮಾಷೆಗಾಗಿ ಮಾತನಾಡುತ್ತೇನೆ. ಅದೇ ರೀತಿಯಲ್ಲಿ ಕಳಕಪ್ಪ ಬಂಡಿಯವರೊಂದಿಗೆ ತಮಾಷೆಯಾಗಿ ಮಾತನಾಡಿದ್ದೇನೆಯೆ ಹೊರತು ಇನ್ನಾವುದೇ ಉದ್ದೇಶವಿರಲಿಲ್ಲ. ಜಾಲತಾಣಗಳಲ್ಲಿ ಬೇರೆ ಅರ್ಥದಲ್ಲಿ ಪ್ರಚಾರಗೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಇದನ್ನು ಯಾರು ಅಪಪ್ರಚಾರ ಮಾಡಬಾರದೆಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಾಸಕ ಕಳಕಪ್ಪ ಬಂಡಿಯವರು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಜನಪ್ರಿಯರಾಗಿದ್ದಾರೆ. ಚುನಾವಣೆ ಇನ್ನೂ ದೂರದಲ್ಲಿದೆ. ಕ್ಷೇತ್ರದ ಜನರು ಇದಾವುದರ ಬಗ್ಗೆಯೂ ತಲೆ ಕೆಡೆಸಿಕೊಳ್ಳದೇ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ ಯಡಿಯೂರಪ್ಪ ಅವರನ್ನು ಹೊರ ಹಾಕುವ ಹುನ್ನಾರ?

ಬೆಂಗಳೂರು : ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಸೋಂಕು ಸರ್ವ ವ್ಯಾಪಿ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶನಿವಾರ ದಿ. 18 ರಂದು 82 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ…

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.