ಉತ್ತರಪ್ರಭ ಸುದ್ದಿ
ನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಬಂಡಿಯವರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಿರುವಾಗ “ಸ್ಪರ್ಧೆ ಮಾಡುತ್ತೀಯಾ ಅಂತಾ ಕೇಳಿದಾಗ ನನ್ನ ಮೇಲೆ ಜವಾಬ್ದಾರಿ ಹಾಕಿದ್ದರು, ಅದಕ್ಕೆ ನಾನು ಜನ ಈಗಾಗಲೇ ನೀನು ನಿಲ್ಲುವುದು ಬೇಡ ಅಂತಾ ಹೇಳುತ್ತಿದ್ದಾರೆ ಅಂತಾ ನಗೆ ಚಟಾಕಿ ಹಾರಿಸಿದ್ದ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರುಗಳು ಕೂಡಾ ಇದ್ದರು. ಇದೊಂದು ಅನೌಪಚಾರಿಕ ತಮಾಷೆಯ ಸಂಭಾಷಣೆಯಾಗಿದ್ದು, ಇದನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ನನಗೆ ಆಪ್ತರಾದವರೊಂದಿಗೆ ಈ ರೀತಿಯಲ್ಲಿ ಆಪ್ತತೆಯಿಂದ ತಮಾಷೆಗಾಗಿ ಮಾತನಾಡುತ್ತೇನೆ. ಅದೇ ರೀತಿಯಲ್ಲಿ ಕಳಕಪ್ಪ ಬಂಡಿಯವರೊಂದಿಗೆ ತಮಾಷೆಯಾಗಿ ಮಾತನಾಡಿದ್ದೇನೆಯೆ ಹೊರತು ಇನ್ನಾವುದೇ ಉದ್ದೇಶವಿರಲಿಲ್ಲ. ಜಾಲತಾಣಗಳಲ್ಲಿ ಬೇರೆ ಅರ್ಥದಲ್ಲಿ ಪ್ರಚಾರಗೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಇದನ್ನು ಯಾರು ಅಪಪ್ರಚಾರ ಮಾಡಬಾರದೆಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಾಸಕ ಕಳಕಪ್ಪ ಬಂಡಿಯವರು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಜನಪ್ರಿಯರಾಗಿದ್ದಾರೆ. ಚುನಾವಣೆ ಇನ್ನೂ ದೂರದಲ್ಲಿದೆ. ಕ್ಷೇತ್ರದ ಜನರು ಇದಾವುದರ ಬಗ್ಗೆಯೂ ತಲೆ ಕೆಡೆಸಿಕೊಳ್ಳದೇ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶೈಕ್ಷಣಿಕ ವರ್ಷ ಯಾವಾಗ ಅಂತಾ ಸೂಕ್ತ ತೀರ್ಮಾನ

ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನದ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.