ಉತ್ತರಪ್ರಭ

ಗದಗ: ವಿದ್ಯಾದಾನ ಶಿಕ್ಷಣ ಸಮಿತಿ (VDST) ಗದಗ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಸುಧಾ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಸ್ಥೆಯೂ ೧೯೨೦ ರಿಂದ ನಿರಂತರವಾಗಿ ಶಿಕ್ಷಣವನ್ನು ನೀಡುತ್ತಿದ್ದು, ಈ ಸಾಮಾಜಿಕ ಕಾರ್ಯಕ್ಕೆ ನನ್ನ ಅಭಿನಂದನೆಗಳು ಎಂದು ಹೇಳುತ್ತಾ ಅವರು ಶಿಕ್ಷಣ ಮತ್ತು ಸಾಮಾಜಿಕ ಮೌಲ್ಯಗಳ ಕುರಿತು ಮಾತನಾಡಿದರು. ಅವರಿಗೆ ಸಂಸ್ಥೆಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಂಜಾರಾ ಸಮಾಜದಿಂದ ವಿಶೇಷವಾಗಿ ಬಂಜಾರಾ ಸಂಸ್ಕೃತಿಯನ್ನೂ ಬಿಂಬಿಸುವ ಶ್ರೀಮಂತ ಕಲೆಯ ಉಡುಗೆಗಳನ್ನು ಶ್ರೀಮತಿ ಸುಧಾ ಮೂರ್ತಿಯವರಿಗೆ ಉಡುಗೊರೆಯಾಗಿ ನೀಡಲಾಯಿತು. ಬಂಜಾರಾ ಸಮುದಾಯದ ಸಂಸ್ಕೃತಿ ಮತ್ತು ಕಲೆಗೆ ಪ್ರತೀಕವಾದ ಈ ಉಡುಪುಗಳು ಬಹಳ ಸುಂದರವಾಗಿದೆ ಎಂದು ಹೇಳುತ್ತಾ ತಲೆಯ ಮೇಲೆ ಬಂಜಾರಾ ಚಾದರ ತೊಟ್ಟುಕೊಂಡು ಪೇಟಿಯಾ, ಕಾಂಚಳಿ, ಲೇಪೋಗಳನ್ನು ಕೈಯಲ್ಲಿ ಹಿಡಿದುಕೊಂಡು ವಿಶ್ವ ದರ್ಜೆಯ ಮಾನ್ಯತೆ ಪಡೆದ ಈ ಉಡುಪುಗಳನ್ನು ಕೊಂಡಾಡಿದರು.

ಬಂಜಾರಾ ಸಮುದಾಯದಿಂದ ಸುಧಾ ಮೂರ್ತಿಯವರಿಗೆ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಕ್ಷರಿ ಪುಣ್ಯಾಶ್ರಮದ ಪೀಠಾಧಿಪತಿಗಳು ಶ್ರೀ ಕಲ್ಲಯ್ಯಜ್ಜ ಮಹಾಸ್ವಾಮಿಗಳು, ರಾಮಕೃಷ್ಣ ಆಶ್ರಮ ಗದಗದ ಶ್ರೀ ನೀರ್ಬಯಾನಂದ ಮಹಾಸ್ವಾಮಿಗಳು, ಕೆ.ಎಲ್.ಇ ಸಂಸ್ಥೆಯ ಪ್ರಮುಖರಾದ ಶಂಕ್ರಣ್ಣ ಮನವಳ್ಳಿ, ವಿ.ಆರ್.ಎಲ್ ಸಂಸ್ಥೆಯ ಮುಖ್ಯಸ್ಥ ವಿಜಯ ಸಂಕೇಶ್ವರ್, ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಮಾಜಿ ಶಾಸಕ ಡಿ.ಆರ್.ಪಾಟೀಲ, ವಿದ್ಯಾದಾನ ಸಮಿತಿ ಅಧ್ಯಕ್ಷ ಡಿ.ಬಿ.ಹುಯಿಲಗೋಳ, ಕಾರ್ಯದರ್ಶಿ ಶ್ರೀನಿವಾಸ್ ಹುಯಿಲಗೋಳ, ಪ್ರಾಚಾರ್ಯರಾದ, ಶ್ರೀಮತಿ ಮುಕ್ತ ಉಡುಪಿ ಹಾಗೂ ಶ್ರೀ ಎಂ ಸಿ ಕಟ್ಟಿಮನಿ, ಬಂಜಾರ ಸಮುದಾಯದ ಪ್ರೊ. ಬಿ.ಎಸ್ ರಾಠೋಡ, ಪ್ರೊ. ಬಿಲ್ಲು ಚವ್ಹಾಣ, ವೆಂಕಟೇಶ ರಾಠೋಡ, ರಮೇಶ ಲಮಾಣಿ, ಸಂಜು ಲಮಾಣಿ ಸೇರಿದಂತೆ, ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳು, ಸಂಸ್ಥೆಯ ಆಡಳಿತ ಮಂಡಳಿ ವರ್ಗದವರು, ಸಿಬ್ಬಂದಿಗಳು, ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…

ಬೆಳಹೋಡ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ದಾವಲಸಾಬ್ ಹಿತ್ತಲಮನಿ ಆಯ್ಕೆ

ಉತ್ತರಪ್ರಭ ಸುದ್ದಿ ಗದಗ: ತಾಲೂಕಿನ ಬೆಳಹೋಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ…