ಉತ್ತರಪ್ರಭ
ಬೆಂಗಳೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಸಲು ಮತ್ತು ಸ್ವೀಕರಿಸಲು ದಿನಾಂಕ 15-11-2022ರ ವರೆಗೆ ಸಮಯಾವಕಾಶ ನೀಡಲಾಗಿತ್ತು.


ಆದರೆ, ನಿರೀಕ್ಷೆಗೂ ಮೀರಿದ ಆಕಾಂಕ್ಷಿಗಳಿದ್ದು, ವಿಪರೀತ ಒತ್ತಡ ಇರುವುದರಿಂದ ಈ ಕಾಲಾವಧಿಯನ್ನು ಅರ್ಜಿ ಸಲ್ಲಿಸಲು ಮತ್ತು ಸ್ವೀಕರಿಸಲು ಕೊನೆಯ ದಿನಾಂಕವನ್ನು 21.11.2022ರ ಸೋಮವಾರ ಸಂಜೆ 06.00 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

ಈ ದಿನಾಂಕವನ್ನು ಮುಂದುಡಲು ಕಾಂಗ್ರೆಸ್ ಪಕ್ಷದ ಹಲವು ಹಾಲಿ ಶಾಸಕರಾಗಲಿ ಹಾಗೂ ಮಾಜಿ ಶಾಸಕರಾಗಲಿ ಈ ಬಾರಿ ನಿಗದಿತ ದಿನಾಂಕದಲ್ಲಿ ಅರ್ಜಿ ಸಲ್ಲಿಸದ ಕಾರಣ ಮುಂದುಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಮೊಟ್ಟೆ ಭಾಗ್ಯ ವಿಸ್ತರಿಸಿ ಬಜೆಟ್ ನಲ್ಲಿ ಘೋಷಿಸಿ- ಸರಕಾರಕ್ಕೆ ಆಗ್ರಹ

ಆಲಮಟ್ಟಿ : 1 ರಿಂದ 10 ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿರುವ ಕ್ಷೀರ ಭಾಗ್ಯದ ಮಾದರಿಯಲ್ಲೇ…

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು

ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.