ಉತ್ತರಪ್ರಭ

ನರಗುಂದ: ತಾಲ್ಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 3 ನೇ ವಾರ್ಡಿನ ಲಕ್ಷ್ಮಣ ಮಲ್ಲಪ್ಪ ಕಂಬಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಬಾಪು ಹಿರೇಗೌಡ್ರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ಲಕ್ಷ್ಮಣ ಕಂಬಳಿ ಮಾತ್ರ ನಾಮಪತ್ರ ಸಲ್ಲಿಸಿದ್ದು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಚುಣಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ಲಕ್ಷ್ಮಣ ಕಂಬಳಿಗೆ ಅಧಿಕಾರ ವಹಿಸಿಕೊಟ್ಟರು.

ನೂತನ ಅಧ್ಯಕ್ಷ ಲಕ್ಷ್ಮಣ ಕಂಬಳಿ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಮಾಜಿ ಅಧ್ಯಕ್ಷ ಸಹೋದರ ಮುತ್ತು ರಾಯರಡ್ಡಿ ಹಾಗೂ ಎಲ್ಲ ಸದಸ್ಯರಿಗೂ ಅಭಿನಂದನೆ ‌ಸಲ್ಲಿಸಿದರು. ಗ್ರಾಮದ ಸರ್ವತೋಮಖ ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆಂದು ಬರವಸೆ ನೀಡಿದರು.

ಚುಣಾವಣಾಧಿಕಾರಿ ಮಂಜುಳಾ ಹಕಾರಿ ಮಾತನಾಡಿ, ಸದಸ್ಯರು, ಉಪಾಧ್ಯಕ್ಷರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಚಿಕ್ಕನರಗುಂದ ಗ್ರಾಮವನ್ನ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ರೂಪಿಸಬಹುದು.ಅಭಿವೃದ್ಧಿ ವಿಚಾರಗಳಿಗೆ ರಾಜಕಾರಣವನ್ನು ಬೆರೆಸಬಾರದು ಎಂದು ಸಲಹೆ ನೀಡಿದರು.

ಈ ಸಂಧರ್ಭದಲ್ಲಿ ಮಾಜಿ ಅಧ್ಯಕ್ಷರಾದ ಮುತ್ತು ರಾಯರಡ್ಡಿ, ಪಂ ಅಭಿವೃದ್ಧಿ ಅಧಿಕಾರಿ ಕು.ಶೈನಾಜ್ ಮುಜಾವರ್, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಶರಣಬಸಪ್ಪ ಹಳೇಮನಿ, ಸದಸ್ಯರಾದ ಬಾಪು ಹಿರೇಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶೋಭಾ ಕೋಣನ್ನವರ, ನಿರ್ಮಲಾ ತಳವಾರ, ಶಂಕ್ರಮ್ಮ ಚಲವಾದಿ, ಗ್ರಾಮದ ಹಿರಿಯರಾದ ಪಡಿಯಪ್ಪ ಮರಿಯಣ್ಣವರ, ಶ್ರೀನಿವಾಸ ರಾಯರಡ್ಡಿ, ಹನಮಂತ ಚಾವಡಿ, ಮಲ್ಲಿಕಾರ್ಜುನ ಸಾತಣ್ಣವರ, ಮಲ್ಲನಗೌಡ ಸರ್ವಮಾನೇದ, ಬಸವರಾಜ ಹೊಂಗಲ್, ಕರಗೌಡ ಚನ್ನಪ್ಪಗೌಡ್ರ, ಶಿವರಡ್ಡಿ ತಿಮ್ಮರಡ್ಡಿ, ಬಸನಗೌಡ ಮುದಿಗೌಡ್ರ, ಅಡಿವೆಪ್ಪ ಮರಿಯಣ್ಣವರ, ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಅಭಿಮಾನಿಗಳಿಂದ ಪುನಿತ್ ರಾಜಕುಮಾರ ಜನ್ಮದಿನಾಚರಣೆ

ಉತ್ತರಪ್ರಭ ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ…

ನಗರದ ಸ್ಥಳೀಯ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರಸಭೆ ಚುನಾವಣೆ ಸೇರಿದಂತೆ ಸ್ಥಳೀಯ ಸಾರ್ವತ್ರಿಕ ಚುನಾವಣೆಯು ದಿನಾಂಕ:27.12.2021 ರಂದು…