ಉತ್ತರಪ್ರಭ ಸುದ್ದಿ

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡೆದಿದೆ..

ಮಧ್ಯರಾತ್ರಿ ಗೋವಾದಿಂದ ಮಾವನ ಮನೆಗೆ ಬಂದಿದ್ದ ಅಳಿಯ ರಾಕ್ಷಸಿಕೃತ್ಯ ಎಸಗಿದ್ದು, ಗಾಯಾಳು ತಾಯಿ, ಮಗುವನ್ನ ಗದಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಚಾಕು ಇರಿದ ಮುರಳಿ ಪೂಜಾರ್ (32) ಎಂಬಾತನನ್ನ ಮರಕ್ಕೆ ಕಟ್ಟಿಹಾಕಿದ್ದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ‌..

ಗೋವಾದಲ್ಲಿ ಕೆಲಸ ಮಾಡ್ತಿದ್ದ ಮುರುಳಿ ಅಲ್ಲಿ‌ ಪತ್ನಿಯೊಂದಿಗೆ ಕಿರಿಕ್ ಮಾಡ್ಕೊಂಡಿದ್ದ.. ಹೀಗಾಗಿ ಪತ್ನಿಯನ್ನ ಬಿಟ್ಟು ಮಗುವಿನೊಂದಿಗೆ ಡೋಣಿ ತಾಂಡಾದಲ್ಲಿನ ತವರು ಮನೆಗೆ ಸಕ್ಕುಬಾಯಿ ಬಂದಿದ್ರು..

ರಾಜಿಪಂಚಾಯ್ತಿ ಬಳಿಕ ಮುರಳಿ ಹಾಗೂ ಸಕ್ಕುಬಾಯಿ ಅವರನ್ನ ಒಂದು ಮಾಡೋದಕ್ಕೆ ಹಿರಿಯರು ಮುಂದಾಗಿದ್ರು.. ನಿನ್ನೆಯಷ್ಟೆ ಹಿರಿಯರು ಸೇರಿ ಮಾತುಕಥೆ ನಡೆಸಿದ್ರು.. ಬೆಳಗ್ಗೆ ಅಳಿಯನೊಂದಿಗೆ ಗೋವಾಕ್ಕೆ ಕಳಸೋದಕ್ಕೆ ನಿರ್ಧಾರವನ್ನೂ ಮಾಡ್ಲಾಗಿತ್ತು.. ಆದ್ರೆ ಏಕಾ ಏಕಿ ಮಧ್ಯರಾತ್ರಿ ಬಂದಿದ್ದ ಅಳಿಯ ಸಕ್ಕುಬಾಯಿ, ಶಿವಂ ಮೇಲೆ ಹಲ್ಲೆ ಮಾಡಿದ್ದಾರೆ.. ಸದ್ಯ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದು ಪ್ರಾಣಾಪಾಯ ಇಲ್ಲ ಅಂತಾ ವೈದ್ಯರು ತಿಳಿಸಿದ್ದಾರೆ..

ಚಾಕು ಇರಿದ ಮುರಳಿಯನ್ನ ಕೂಡಿಹಾಕಿದ್ದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.. ಪ್ರಕರಣ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ..

Leave a Reply

Your email address will not be published. Required fields are marked *

You May Also Like

ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?

ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ರಾಜ್ಯದಲ್ಲಿಂದು 5199 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5199 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು

ರಾಜ್ಯ ಕ.ಸಾ.ಪ ಕಾರ್ಯಕಾರಿ ಸಮಿತಿಗೆ ನೇಮಕ.

ಬೆಂಗಳೂರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಕನ್ನಡ ಭಾಷೆ,…