ಉತ್ತರಪ್ರಭ ಸುದ್ದಿ

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡೆದಿದೆ..

ಮಧ್ಯರಾತ್ರಿ ಗೋವಾದಿಂದ ಮಾವನ ಮನೆಗೆ ಬಂದಿದ್ದ ಅಳಿಯ ರಾಕ್ಷಸಿಕೃತ್ಯ ಎಸಗಿದ್ದು, ಗಾಯಾಳು ತಾಯಿ, ಮಗುವನ್ನ ಗದಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಚಾಕು ಇರಿದ ಮುರಳಿ ಪೂಜಾರ್ (32) ಎಂಬಾತನನ್ನ ಮರಕ್ಕೆ ಕಟ್ಟಿಹಾಕಿದ್ದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ‌..

ಗೋವಾದಲ್ಲಿ ಕೆಲಸ ಮಾಡ್ತಿದ್ದ ಮುರುಳಿ ಅಲ್ಲಿ‌ ಪತ್ನಿಯೊಂದಿಗೆ ಕಿರಿಕ್ ಮಾಡ್ಕೊಂಡಿದ್ದ.. ಹೀಗಾಗಿ ಪತ್ನಿಯನ್ನ ಬಿಟ್ಟು ಮಗುವಿನೊಂದಿಗೆ ಡೋಣಿ ತಾಂಡಾದಲ್ಲಿನ ತವರು ಮನೆಗೆ ಸಕ್ಕುಬಾಯಿ ಬಂದಿದ್ರು..

ರಾಜಿಪಂಚಾಯ್ತಿ ಬಳಿಕ ಮುರಳಿ ಹಾಗೂ ಸಕ್ಕುಬಾಯಿ ಅವರನ್ನ ಒಂದು ಮಾಡೋದಕ್ಕೆ ಹಿರಿಯರು ಮುಂದಾಗಿದ್ರು.. ನಿನ್ನೆಯಷ್ಟೆ ಹಿರಿಯರು ಸೇರಿ ಮಾತುಕಥೆ ನಡೆಸಿದ್ರು.. ಬೆಳಗ್ಗೆ ಅಳಿಯನೊಂದಿಗೆ ಗೋವಾಕ್ಕೆ ಕಳಸೋದಕ್ಕೆ ನಿರ್ಧಾರವನ್ನೂ ಮಾಡ್ಲಾಗಿತ್ತು.. ಆದ್ರೆ ಏಕಾ ಏಕಿ ಮಧ್ಯರಾತ್ರಿ ಬಂದಿದ್ದ ಅಳಿಯ ಸಕ್ಕುಬಾಯಿ, ಶಿವಂ ಮೇಲೆ ಹಲ್ಲೆ ಮಾಡಿದ್ದಾರೆ.. ಸದ್ಯ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದು ಪ್ರಾಣಾಪಾಯ ಇಲ್ಲ ಅಂತಾ ವೈದ್ಯರು ತಿಳಿಸಿದ್ದಾರೆ..

ಚಾಕು ಇರಿದ ಮುರಳಿಯನ್ನ ಕೂಡಿಹಾಕಿದ್ದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.. ಪ್ರಕರಣ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ..

Leave a Reply

Your email address will not be published. Required fields are marked *

You May Also Like

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಎಸ್‌ಡಿಎಂಸಿ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು : ಪಿ.ಸಿ.ಜೋಗರೆಡ್ಡಿ

ಶಾಲಾ ಮೇಲುಸ್ತುವಾರಿ ಸಮಿತಿ ಆಡಳಿತದಲ್ಲಿ ಶಾಲೆಯ ಅಭಿವೃದ್ಧಿ ಅಡಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಮದ್ಯೆ ಎಸ್‌ಡಿಎಂಸಿ ಸೇತುವೆಯಾಗಿಕಾರ್ಯ ನಿರ್ವಹಿಸಬೇಕಿದೆ ಎಂದು ಸಿಆರ್‌ಪಿ ಪಿ.ಸಿ.ಜೋಗರೆಡ್ಡಿ ಹೇಳಿದರು.