ಉತ್ತರಪ್ರಭ ಸುದ್ದಿ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ.

ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ ದ್ವೇಷ ಸಾಧಿಸುತ್ತಿದ್ದ ಶಾಬಾದ್ ಶನಿವಾರ ರಾತ್ರಿ ತನ್ನ ಮನೆ ಬಳಿ ಬಂದಿದ್ದ ಮಹಮ್ಮದ್ ಜೊತೆ ಮತ್ತೆ ವಾಗ್ವಾದ ಮಾಡಿ ಚಾಕುವಿನಿಂದ ಮೊಣಕಾಲು ಬಳಿ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಮ್ಮದ್ ನನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಸಬಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋಮು ಸೌಹಾರ್ದಕ್ಕೆ ಸಾಕ್ಷಿಯಾದ ಹಿಂದೂ-ಮುಸ್ಲಿಂ ಯುವಕರು

ನರೆಗಲ್ಲ: ಪಟ್ಟಣದ 3ನೇ ವಾರ್ಡಿನ ಜಕ್ಕಲಿ ರೋಡ್‌ ಆಶ್ರಯ ಕಾಲೋನಿಯಲ್ಲಿ ಹಿಂದೂ, ಮುಸ್ಲಿಂ ಧರ್ಮದ ಜನರು…

ಪಿಯುಸಿ ಸರ್ಕಾರಿ ಕಾಲೇಜುಗಳು ‘ಫೇಲ್’: ದೆಹಲಿ ಸರ್ಕಾರಿ ಶಾಲೆಗಳ ಮೇಲುಗೈ

ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಏನಾಗಬಹುದು ಎಂಬುದನ್ನು

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಖಾಸಗಿ ಶಾಲಾ ಶಿಕ್ಷಕ ಆತ್ಮಹತ್ಯಗೆ ಯತ್ನ

ತಾಲೂಕಿನ ಡಿ ಪೌಲ್ ಅಕ್ಯಾಡಮಿ ಶಾಲೆಯ ಶಿಕ್ಷಕನರ‍್ವ ಕೆಲಸದಿಂದ ವಜಾಗೊಳಿಸಿದ ಕಾರಣ ಮನನೊಂದು ಆತ್ಮ ಹತ್ಯೆಕ್ಕೆ ಯತ್ನಿಸಿದ ಘಟನೆ ನಡೆದಿದೆ.