ಉತ್ತರಪ್ರಭ ಸುದ್ದಿ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ.

ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ ದ್ವೇಷ ಸಾಧಿಸುತ್ತಿದ್ದ ಶಾಬಾದ್ ಶನಿವಾರ ರಾತ್ರಿ ತನ್ನ ಮನೆ ಬಳಿ ಬಂದಿದ್ದ ಮಹಮ್ಮದ್ ಜೊತೆ ಮತ್ತೆ ವಾಗ್ವಾದ ಮಾಡಿ ಚಾಕುವಿನಿಂದ ಮೊಣಕಾಲು ಬಳಿ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಮ್ಮದ್ ನನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಸಬಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಪೋಷಣಾಂಶ ಆಹಾರವೇ ಆರೋಗ್ಯಕ್ಕೆ ಶೋಭಿತ – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಜೀವಸತ್ವವುಳ್ಳ ಪೋಷಕಾಂಶಗಳ ಆಹಾರ ಸೇವನೆಯಿಂದ ನಮ್ಮ ಶರೀರವನ್ನು ಸ್ವಸ್ಥವಾಗಿ,ಆರೋಗ್ಯಯುತವಾಗಿ ಕಾಪಾಡಿಕೊಳ್ಳಬಹುದು. ಇದುವೇ ಆರೋಗ್ಯ…

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…