ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್ ಸೆಟ್‌ಗಳನ್ನು ಅಳವಡಿಸುವ ಯೋಜನೆಯನ್ನು ರಾಜ್ಯ ಸಕಾ೯ರದ ಸ್ವಾಮ್ಯಕ್ಕೆ ಒಳಪಟ್ಟಿರುವ ಕನಾ೯ಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ( ಕೆ.ಆರ್.ಇ.ಡಿ.ಎಲ್) ಮೂಲಕ ಹಮ್ಮಿಕೊಳ್ಳಲಾಗಿದ್ದು ಆನ್ಲೈನ್ ಅಜಿ೯ ನೋಂದಣಿ ಪ್ರಕ್ರಿಯೆ ಕಳೆದ ಜುಲೈನಿಂದ ಆರಂಭಿಸಲಾಗಿದೆ ಎಂದು ಧಾರವಾಡ ಕೆ.ಆರ್.ಇ.ಡಿ.ಎಲ್. ಎ.ಇ.ಶ್ರೀಮತಿ ಸವಿತಾ ಮೇಟಿ ತಿಳಿದದರು.


ಇಲ್ಲಿನ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯಲ್ಲಿ ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆ ಕುರಿತು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸಕಾ೯ರದ ಸೌಲಭ್ಯಗಳನ್ನು ಪಡೆದುಕೊಂಡು ರೈತರು ತಮ್ಮ ಆಥಿ೯ಕ ಮಟ್ಟ ಸುಧಾರಿಸಿಕೊಳ್ಳಬೇಕು ಎಂದರು.
ರಾಜ್ಯ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ ಆನ್ಲೈನ್ ಅಜಿ೯ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಆನ್ಲೈನ್ ಮೂಲಕವೇ ಅಜಿ೯ ಸಲ್ಲಿಸಬೇಕು. ಒದಗಿಸಬೇಕಾದ ವಿವರಗಳನ್ನು ಕೆ.ಆರ್.ಇ.ಡಿ.ಎಲ್.ಅಧಿಕೃತ ಜಾಲತಾಣ www.kredl.Karnataka.gov.in ನಲ್ಲಿ ಹೆಚ್ಚಿನ ಮಾಹಿತಿಗಳನ್ನು ಪಡೆದು ಆಸಕ್ತರು ಅಜಿ೯ ಸಲ್ಲಿಸಬಹುದೆಂದು ಅವರು ಹೇಳಿದರು.
ಇದಕ್ಕೆ ಪ್ರಮುಖ ಮಾನದಂಡಗಳಿದ್ದು ಗಮನಿಸಬೇಕು. ರೈತರು ಜಮೀನಿನಲ್ಲಿ ಬಾವಿಯನ್ನು ಕೊರೆಸಿರಬೇಕು.ಹೊಸ ಕೃಷಿ ಪಂಪ್ ಸೆಟ್ ಗಳಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.‌ ಹಾಲಿ ವಿದ್ಯುತ್ ಸಂಪರ್ಕ ಹೊಂದಿರುವ ಪಂಪ್ ಸೆಟ್ ಗಳು ಅರ್ಹವಿರುವುದಿಲ್ಲ, ಅಜಿ೯ ಸಲ್ಲಿಸುವರು ಒಂದು ಸೌರ ಪಂಪ್ ಸೆಟ್ ಗೆ ಮಾತ್ರ ಅಜಿ೯ ಹಾಕಬೇಕು. ಈಗಾಗಲೇ ಇತರ ಅನುದಾನಿತ ಸಕಾ೯ರಿ ಪ್ರಾಯೋಜಿತ ಯೋಜನೆಗಳಡಿ ಸೌರ ಪಂಪ್ ಸೆಟ್ ಪಡೆದಿದ್ದರೆ ಅಂತಹ ಅಜಿ೯ದಾರರು ಅರ್ಹರಿರುವುದಿಲ್ಲ. ವಿದ್ಯುತ್ ಸಂಪರ್ಕ ಇಲ್ಲದ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸೌರ ಚಾಲಿತ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲು ಆದ್ಯತೆ ನೀಡಲಾಗುತ್ತಿದೆ. ಎಲ್ಲ ವರ್ಗದ ಅಜಿ೯ಗಳಲ್ಲಿ ವಿಶೇಷ ತೇತನರಿಗೆ ಶೇ 5 ರಷ್ಟು ಮೀಸಲಾತಿ ಒದಗಿಸಲಾಗಿದೆ. ಸಾಮಾನ್ಯ ಹಾಗು ಪ.ಜಾ,ಪ.ಪಂ ವರ್ಗದಲ್ಲಿ ಸೂಚಿಸಲಾಗಿರುವ ವಂತಿಗೆ ಮೊತ್ತವನ್ನು ಆಯಾ ವಿಶೇಷ ಚೇತನ ವರ್ಗದವರು ಅವರ ವಂತಿಗೆ ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 8095132100 ಗೆ ಸಂಪಕಿ೯ಸಬಹುದು ಎಂದು ಅವರು ತಿಳಿಸಿದರು.
ಈ ಯೋಜನೆಯ ಹೆಸರಿನಲ್ಲಿ ನಕಲಿ ಜಾಲತಾಣಗಳು ರೈತರನ್ನು ವಂಚಿಸುತ್ತಿದ್ದು ಮೋಸ ಹೋಗದಿರಲು ಎಚ್ಚರಿಕೆ ವಹಿಸಬೇಕು ಎಂದು ಸವಿತಾ ಮೇಟಿ ರೈತರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಕೊರೊನಾ ಭೀತಿ: ನರಳುತ್ತಿರುವ ವ್ಯಕ್ತಿಗೆ ನೆರವು ನೀಡಲು ಭಯಪಟ್ಟ ಜನತೆ!

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರುವಿಗೆ ಯಾರೊಬ್ಬರು ಮುಂದಾಗದ ಅಮಾನವೀಯ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಮುತ್ತಪ್ಪ ರೈ ಗನ್ ಮ್ಯಾನ್ ಗಳನ್ನು ಬಂಧಿಸಿದ್ದೇಕೆ?

ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ…

ಎಂಎಚ್ಎಂ ಶಾಲೆಯಲ್ಲಿ ಸ್ನೇಹ ಸಮ್ಮೇಳನ ಸಂಭ್ರಮ ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪಗೆ ಭಾರತರತ್ನ ಪ್ರಶಸ್ತಿ ನೀಡಿ

ಚಿತ್ರವರದಿ : ಗುಲಾಬಚಂದ ಜಾಧವಆಲಮಟ್ಟಿ(ವಿಜಯಪುರ ಜಿಲ್ಲೆ) : ಉತ್ಕಟ ಕಾಯಕದ ತತ್ವ ಶಾಸ್ತ್ರ ಪರಿಪಾಲಿಸಿ ಶರಣ…