ಆಲಮಟ್ಟಿ : ಸನಿಹದ ಸುತಗುಂಡಾರ ಶ್ರೀ ಕರವೀರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆಲಮಟ್ಟಿಗೆ ಸಮೀಪದ ಸುತಗುಂಡಾರದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆ ವಿಜಯಪುರ, ಆಲಮಟ್ಟಿ ಡ್ಯಾಂ ಸೈಟ್‌ ಶಾಖಾ ಗ್ರಂಥಾಲಯದ ಆಶ್ರಯದಲ್ಲಿ ಸಂಯೋಜಿಸಿದ್ದ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.
ರಕ್ಷಿತಾ ಎಳ್ಳಿಗುತ್ತಿ ಪ್ರಥಮ,ಬಸವರಾಜ ಮನಗೂಳಿ ದ್ವೀತಿಯ, ಪೃಥ್ವಿ ವಾಲಿಕಾರ ತೃತೀಯ ಸ್ಥಾನ ಪಡೆದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಗ್ರಂಥಪಾಲಕ ಪರುಶುರಾಮ ಮೂಲಂಗಿ, ಮಕ್ಕಳ ಜ್ಞಾನ ವಿಕಾಸಕ್ಕೆ, ತೀಕ್ಷ್ಣ ಭಾಷಾ ನುಡಿ ಬರಹಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳು ಪೂರಕವಾಗಿವೆ. ಜೊತೆಗೆ ಗ್ರಂಥಾಲಯಗಳು ಓದುವ ಅಭಿರುಚಿ,ಕೌಶಲ್ಯ ಬೆಳೆಸಿ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದರು.
ಎಂ.ಜಿ.ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಅಂಗಡಿ,ಎ.ಎಲ್.ಬಡಿಗೇರ, ಎಸ್.ಬಿ.ದಳವಾಯಿ, ಆರ್.ಡಿ.ತಹಶೀಲ್ದಾರ,ವಿಶ್ವನಾಥ ನುಗ್ಲಿ ಇತರರಿದ್ದರು.

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ರಾಜ್ಯದ ಬೊಕ್ಕಸಕ್ಕೆ ಭಾರಿ ಹೊಡೆತ!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಇನ್ನೂ ಲಾಕ್ ಡೌನ್ ಮುಂದುವರೆದಿದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ನಷ್ಟವಾಗಿದೆ.