ಆಲಮಟ್ಟಿ : ಸನಿಹದ ಸುತಗುಂಡಾರ ಶ್ರೀ ಕರವೀರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆಲಮಟ್ಟಿಗೆ ಸಮೀಪದ ಸುತಗುಂಡಾರದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆ ವಿಜಯಪುರ, ಆಲಮಟ್ಟಿ ಡ್ಯಾಂ ಸೈಟ್‌ ಶಾಖಾ ಗ್ರಂಥಾಲಯದ ಆಶ್ರಯದಲ್ಲಿ ಸಂಯೋಜಿಸಿದ್ದ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.
ರಕ್ಷಿತಾ ಎಳ್ಳಿಗುತ್ತಿ ಪ್ರಥಮ,ಬಸವರಾಜ ಮನಗೂಳಿ ದ್ವೀತಿಯ, ಪೃಥ್ವಿ ವಾಲಿಕಾರ ತೃತೀಯ ಸ್ಥಾನ ಪಡೆದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಗ್ರಂಥಪಾಲಕ ಪರುಶುರಾಮ ಮೂಲಂಗಿ, ಮಕ್ಕಳ ಜ್ಞಾನ ವಿಕಾಸಕ್ಕೆ, ತೀಕ್ಷ್ಣ ಭಾಷಾ ನುಡಿ ಬರಹಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳು ಪೂರಕವಾಗಿವೆ. ಜೊತೆಗೆ ಗ್ರಂಥಾಲಯಗಳು ಓದುವ ಅಭಿರುಚಿ,ಕೌಶಲ್ಯ ಬೆಳೆಸಿ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದರು.
ಎಂ.ಜಿ.ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಅಂಗಡಿ,ಎ.ಎಲ್.ಬಡಿಗೇರ, ಎಸ್.ಬಿ.ದಳವಾಯಿ, ಆರ್.ಡಿ.ತಹಶೀಲ್ದಾರ,ವಿಶ್ವನಾಥ ನುಗ್ಲಿ ಇತರರಿದ್ದರು.

Leave a Reply

Your email address will not be published. Required fields are marked *

You May Also Like

ಪಕ್ಷೇತರ ಅಬ್ಯರ್ಥಿಗೆ ಸಿಪಿಐಎಂ ಬೆಂಬಲ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಸಿಪಿಐಎಂ ಪಕ್ಷ ಬೆಂಬಲಿಸಲಿದೆ ಎಂದು ಸಿಪಿಐಎಂ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ತಿಳಿಸಿದರು.

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ.

ಎಲ್ಲ ಸಮುದಾಯಕ್ಕೂ ಮೀಸಲಾತಿ ಸಿಗಲಿ: ಕಾರಜೋಳ

ಸಾಂವಿಧಾನದ ಆಶಯದಂತೆ ಶೋಷಿತ ಎಲ್ಲ ಸಮುದಾಯಗಳಿಗೂ ಮುಖ್ಯವಾಹಿನಿಗೆ ಬರಲು ಮೀಸಲಾತಿ ಸಿಗಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.