ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಉತ್ತರಪ್ರಭ

ನರೆಗಲ್ಲ:‌ ಸಮೀಪದ ಜಕ್ಕಲಿ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಕೆಲಸವನ್ನು ಮಾಡಲು ಚುನಾಯಿತ ಸದಸ್ಯರು ಶೇ. 5 ರಿಂದ 10 ವರೆಗೆ ಕಮಿಷನ್‌ ಬೇಡಿಕೆಯನ್ನು ಇಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಎಸ್.‌ ಎಚ್.‌ ತಳವಾರ ಪಿಡಿಒ ಅವರಿಗೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿ ವೈರಲ್‌ ಆಗುತ್ತಿದೆ.

ಪದವಿಧರ ನಿರುದ್ಯೋಗಿ ಹಾಗೂ 4ನೇ ದರ್ಜೆಯ ಗುತ್ತಿಗೆದಾರನಾಗಿರುವ ಇವರು ನರೇಗಾದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಆದರೆ ಗ್ರಾ.ಪಂ. ಕೆಲವು ಚುನಾಯಿತ ಸದಸ್ಯರು ಶೇ. 10 ರವರೆಗೆ ಕಮಿಷನ್‌ ನೀಡದಿದ್ದರೆ ಕಾಮಗಾರಿಯ ಬಿಲ್‌ ಮಾಡಿಸಿಕೊಡುವುದಿಲ್ಲ, ಯಾವ ಗುತ್ತಿಗೆದಾರ ಹೆಚ್ಚಿಗೆ ಕಮಿಷನ್‌ ನೀಡುತ್ತಾರೋ ಅವರಿಗೆ ಕೆಲಸ ಕೊಡಿಸುತ್ತೇವೆ ಎಂದು ಒತ್ತಾಯ ಹಾಗೂ ಬೇಡಿಕೆಯನ್ನು ನೀಡುತ್ತಿದ್ದಾರೆ. ಆದ್ದರಿಂದ ಅಂತಹ ಸದಸ್ಯರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದಾರೆ.

ಯಾವ ಸದಸ್ಯರು ಕಮಿಷನ್ ಕೇಳಿದ್ದಾರೆ ಎನ್ನುವ ಮಾಹಿತಿ ನಮಗಿಲ್ಲ ಹಾಗೂ ಈ ರೀತಿಯಲ್ಲಿ ಕಮಿಷನ್ ಕೇಳಬಾರದು ಎಂದು ಸಾಮೂಹಿಕವಾಗಿ ಎಲ್ಲಾ ಸದಸ್ಯರಿಗೆ ಹೇಳಲಾಗಿದೆ.

ವೀರಪ್ಪ ವಾಲಿ, ಜಕ್ಕಲಿ ಗ್ರಾ.ಪಂ‌. ಅಧ್ಯಕ್ಷ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.

ಹಸಿರು ವಲಯಕ್ಕೂ ವಕ್ಕರಿಸಿದ ಕೊರೊನಾ!

ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.