ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಉತ್ತರಪ್ರಭ

ನರೆಗಲ್ಲ:‌ ಸಮೀಪದ ಜಕ್ಕಲಿ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಕೆಲಸವನ್ನು ಮಾಡಲು ಚುನಾಯಿತ ಸದಸ್ಯರು ಶೇ. 5 ರಿಂದ 10 ವರೆಗೆ ಕಮಿಷನ್‌ ಬೇಡಿಕೆಯನ್ನು ಇಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಎಸ್.‌ ಎಚ್.‌ ತಳವಾರ ಪಿಡಿಒ ಅವರಿಗೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿ ವೈರಲ್‌ ಆಗುತ್ತಿದೆ.

ಪದವಿಧರ ನಿರುದ್ಯೋಗಿ ಹಾಗೂ 4ನೇ ದರ್ಜೆಯ ಗುತ್ತಿಗೆದಾರನಾಗಿರುವ ಇವರು ನರೇಗಾದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಆದರೆ ಗ್ರಾ.ಪಂ. ಕೆಲವು ಚುನಾಯಿತ ಸದಸ್ಯರು ಶೇ. 10 ರವರೆಗೆ ಕಮಿಷನ್‌ ನೀಡದಿದ್ದರೆ ಕಾಮಗಾರಿಯ ಬಿಲ್‌ ಮಾಡಿಸಿಕೊಡುವುದಿಲ್ಲ, ಯಾವ ಗುತ್ತಿಗೆದಾರ ಹೆಚ್ಚಿಗೆ ಕಮಿಷನ್‌ ನೀಡುತ್ತಾರೋ ಅವರಿಗೆ ಕೆಲಸ ಕೊಡಿಸುತ್ತೇವೆ ಎಂದು ಒತ್ತಾಯ ಹಾಗೂ ಬೇಡಿಕೆಯನ್ನು ನೀಡುತ್ತಿದ್ದಾರೆ. ಆದ್ದರಿಂದ ಅಂತಹ ಸದಸ್ಯರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದಾರೆ.

ಯಾವ ಸದಸ್ಯರು ಕಮಿಷನ್ ಕೇಳಿದ್ದಾರೆ ಎನ್ನುವ ಮಾಹಿತಿ ನಮಗಿಲ್ಲ ಹಾಗೂ ಈ ರೀತಿಯಲ್ಲಿ ಕಮಿಷನ್ ಕೇಳಬಾರದು ಎಂದು ಸಾಮೂಹಿಕವಾಗಿ ಎಲ್ಲಾ ಸದಸ್ಯರಿಗೆ ಹೇಳಲಾಗಿದೆ.

ವೀರಪ್ಪ ವಾಲಿ, ಜಕ್ಕಲಿ ಗ್ರಾ.ಪಂ‌. ಅಧ್ಯಕ್ಷ

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಇಂದು ಗದಗನಲ್ಲಿ ನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.