ಉತ್ತರಪ್ರಭ
ಗದಗ:
ರಾಜ್ಯಾದ್ಯಂತ 150 ಸ್ಥಾನ ಗೆಲ್ಲುವ ಉದ್ದೇಶದಿಂದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಆಯೋಜನೆ ಕುರಿತು ನಗರದ ಪತ್ರಿಕಾ ಭವನದಲ್ಲಿ ಎಂ.ಎಲ್.ಸಿ ಎಸ್.ವಿ.ಸಂಕನೂರ್ ಸುದ್ದಿಗೋಷ್ಠಿ.
ಸದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಾವು ಇಗಾಗಲೇ ಭೂತ್ ವಿಜಯ ಅಭಿಯಾನವನ್ನು 10 ದಿನಗಳ ಕಾಲ ಯಶಸ್ವಿಗೊಳಿಸಿದ್ದು, ಬರುವ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಜರುಗಲಿದ್ದು ರಾಜ್ಯಾದ್ಯಂತ 224 ಮತಕ್ಷೇತ್ರದಲ್ಲಿ ಬಿಜೆಪಿಯು ಕನೀಷ್ಠ 150 ಸ್ಥಾನ ಗೆಲ್ಲುವ ಉದ್ದೇಶದಿಂದ, ಬಿಜೆಪಿ ರಾಷ್ಟಾçಧ್ಯಕ್ಷರ ಕರೆಯ ಮೇರೆಗೆ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ವಿಜಯ ಸಂಕಲ್ಪ ಅಭಿಯಾನವು ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳಿದ್ದು, ಅಲ್ಲದೆ 39 ಭಾರತಿಯ ಜನತಾ ಪಾರ್ಟಿಯ ಸಂಘಟನಾತ್ಮಕ ಜಿಲ್ಲೆಗಳಿದ್ದು ಇದರಲ್ಲಿ ಈ ಅಭಿಯಾನವು ಪ್ರಾರಂಭ ವಾಗುವದು ಹಾಗೂ 312 ಮಂಡಳಿಗಳು, 11642 ಶಕ್ತಿ ಕೇಂದ್ರಗಳು, ಸುಮಾರೂ 58,156 ಭೂತ್‌ಗಳು ಇದ್ದು, ಇವೆಲ್ಲದರ ಮೂಲಕ ಸುಮಾರು 2 ಕೋಟಿ ಮತದಾರರನ್ನ ಮುಟ್ಟುವ ಗುರಿ ಹೊಂದಲಾಗಿದೆ ಎಂದರು ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವು 21ರಂದು ವಿಜಯಪುರದ ಸಿಂದಗಿಯಲ್ಲಿ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಷ್ಟಾçಧ್ಯಕ್ಷ ಜೆ.ಪಿ ನಡ್ಡಾ ರವರಿಂದ ವರ್ಚ್ಯುಯಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಏನೆನು..?
• ಪ್ರತಿ ಕುಟುಂಬಗಳಿಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು.
• ಪ್ರತಿ ಬೂತ್ ಗೆ ಹೋದಲ್ಲಿ ವಾಹನಗಳಿಗೆ ಸ್ಟಿಕರ್, ಮನೆ ಗೋಡೆಗಳಿಗೆ ಸ್ಟಿಕರ್ ಹಚ್ಚುವ ಕೆಲಸ ಮಾಡುವುದಾಗಿದೆ.

ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಎಲ್ಲ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಕೇಲೂರ ಗ್ರಾಮಕ್ಕೆ ಜಿಲ್ಲಾಧಿಕಾರಿಗಳ ಬೇಟಿ: ಸಮಾಜ ಕಲ್ಯಾಣ ಇಲಾಖೆಯಿಂದ 4ಲಕ್ಷದ ಚೆಕ್ ವಿತರಣೆ

ಉತ್ತರಪ್ರಭ ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು…