ಉತ್ತರಪ್ರಭ
ಗದಗ:
ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾ.ಪಂ ಹಿಂದಿನ ಪ್ರಬಾರಿ ಪಿಡಿಓ ಶಾಬುದ್ದೀನ ಕವಡೇಲಿ ರನ್ನು ವರ್ಗಾವಣೆ ಮಾಡುವ ಹಾಗೂ ಇವರ ಅಧಿಕಾರದ ಅವಧಿಯಲ್ಲಿ ಅಕ್ರಮವಾಗಿ ಸರ್ಕಾರದ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ದಾಖಲು ಮಾಡಿದ್ದರ ಬಗ್ಗೆ ಸಮಗ್ರ ತನಿಖೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರೈತ ಸೇನಾ ಜಿಲ್ಲಾ ಸಂಚಾಲಕ ಮಂಜಯ್ಯಸ್ವಾಮೀ ಅರವಟಗಿಮಠ ದೂರು ಸಲ್ಲಿಸಿದ್ದು, ಪಂ.ರಾಜ್ ಸಹಾಯಕ ನಿರ್ದೇಶಕರು ತಾ.ಪಂ ಇವರನ್ನು ಪರೀಶಿಲನೆಗೆ ನೇಮಿಸಲಾಗಿತ್ತು.


ಈ ಹಿನ್ನೆಲೆ ಪರೀಶಿಲಿಸಿದ ಪ್ರಕಾರ ಸ್ಥಿರ ಸ್ವತ್ತುಗಳ ಅರ್ಜನೆ ಮತ್ತು ವರ್ಗಾವಣೆ ನಿಯಮಗಳನ್ನು ಉಲ್ಲಂಘನೆ ಹಾಗೂ ಸರ್ಕಾರಿ ಜಮೀನನ್ನು ಯಾರಿಗೂ ಹಂಚಿಕೆ ಮಾಡಲು ಅವಕಾಶ ವಿರುವದಿಲ್ಲ ಎಂಬ ಸ್ಪಷ್ಠ ಸರ್ಕಾರದ ನಿರ್ದೇಶನವನ್ನೆ ಉಲ್ಲಂಘಿಸಿರುವದರಿಂದ ಹಿಂದಿನ ಪ್ರಭಾರ ಪಂಚಾಯತ ಅಭಿವೃಧ್ದಿ ಅಧಿಕಾರಿ ಹಾಗೂ ಪ್ರಸ್ತುತ ಕೋರ್ಲಹಳ್ಳಿ ಗ್ರಾ.ಪಂ ಗ್ರೇಟ್-2 ಕಾರ್ಯದರ್ಶಿ ಎಸ್.ಕೆ.ಕವಡೇಲಿಯರನ್ನು ಜಿಲ್ಲಾ ಪಂಚಾಯತಿ ಸಿ.ಇ.ಓ ಸುಶಿಲಾ ಬಿ ಅಮಾನತು ಮಾಡಿ ದಿ. 17-01-2023 ಆದೇಶ ಹೋರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಅರಣ್ಯ ಇಲಾಖೆ ಕಣ್ಣಿದ್ದು ಕುರುಡಾಯಿತೆ?

ಗದಗ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ನಡೆಯುತ್ತಿರುವ ಸಾ-ಮಿಲ್ಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಟ್ಟಿಗೆ ವ್ಯಾಪಾರ…

ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಗದಗ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾಲೋನಿಗೆಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ  ಅರ್ಜಿ…

ಗದಗ ಜಿಲ್ಲೆಯಲ್ಲಿಂದು ಕೊರೊನಾಗೆ ಮತ್ತೊಂದು ಬಲಿ

ಗದಗ: ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ…