ಉತ್ತರಪ್ರಭ
ಗದಗ:
ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾ.ಪಂ ಹಿಂದಿನ ಪ್ರಬಾರಿ ಪಿಡಿಓ ಶಾಬುದ್ದೀನ ಕವಡೇಲಿ ರನ್ನು ವರ್ಗಾವಣೆ ಮಾಡುವ ಹಾಗೂ ಇವರ ಅಧಿಕಾರದ ಅವಧಿಯಲ್ಲಿ ಅಕ್ರಮವಾಗಿ ಸರ್ಕಾರದ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ದಾಖಲು ಮಾಡಿದ್ದರ ಬಗ್ಗೆ ಸಮಗ್ರ ತನಿಖೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರೈತ ಸೇನಾ ಜಿಲ್ಲಾ ಸಂಚಾಲಕ ಮಂಜಯ್ಯಸ್ವಾಮೀ ಅರವಟಗಿಮಠ ದೂರು ಸಲ್ಲಿಸಿದ್ದು, ಪಂ.ರಾಜ್ ಸಹಾಯಕ ನಿರ್ದೇಶಕರು ತಾ.ಪಂ ಇವರನ್ನು ಪರೀಶಿಲನೆಗೆ ನೇಮಿಸಲಾಗಿತ್ತು.


ಈ ಹಿನ್ನೆಲೆ ಪರೀಶಿಲಿಸಿದ ಪ್ರಕಾರ ಸ್ಥಿರ ಸ್ವತ್ತುಗಳ ಅರ್ಜನೆ ಮತ್ತು ವರ್ಗಾವಣೆ ನಿಯಮಗಳನ್ನು ಉಲ್ಲಂಘನೆ ಹಾಗೂ ಸರ್ಕಾರಿ ಜಮೀನನ್ನು ಯಾರಿಗೂ ಹಂಚಿಕೆ ಮಾಡಲು ಅವಕಾಶ ವಿರುವದಿಲ್ಲ ಎಂಬ ಸ್ಪಷ್ಠ ಸರ್ಕಾರದ ನಿರ್ದೇಶನವನ್ನೆ ಉಲ್ಲಂಘಿಸಿರುವದರಿಂದ ಹಿಂದಿನ ಪ್ರಭಾರ ಪಂಚಾಯತ ಅಭಿವೃಧ್ದಿ ಅಧಿಕಾರಿ ಹಾಗೂ ಪ್ರಸ್ತುತ ಕೋರ್ಲಹಳ್ಳಿ ಗ್ರಾ.ಪಂ ಗ್ರೇಟ್-2 ಕಾರ್ಯದರ್ಶಿ ಎಸ್.ಕೆ.ಕವಡೇಲಿಯರನ್ನು ಜಿಲ್ಲಾ ಪಂಚಾಯತಿ ಸಿ.ಇ.ಓ ಸುಶಿಲಾ ಬಿ ಅಮಾನತು ಮಾಡಿ ದಿ. 17-01-2023 ಆದೇಶ ಹೋರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ಲಕ್ಕುಂಡಿ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿ ಯಾರು..?

ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು…