ಉತ್ತರಪ್ರಭ
ಆಲಮಟ್ಟಿ;
ಇಲ್ಲಿಯ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿನ ಮೈದಾನವನ್ನು 2.5 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಟೆಂಡರ್ ಕರೆಯಲಾಗಿದೆ ಎಂದು ಕೆಬಿಜೆಎನ್ ಎಲ್ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ಹೇಳಿದರು.
ಸ್ಥಳೀಯ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆದ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ಟೇಡಿಯಂ ಮಾದರಿ ವೀಕ್ಷಣಾ ಗ್ಯಾಲರಿ, ತಲಾ 10 ಶೌಚಾಲಯ, ಬಾತ್ ರೂಮ್ , 24 ಗಂಟೆಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒಳಗೊಂಡಿರಲಿದೆ. ಈಗಿರುವ ಮೈದಾನ ಇನ್ನಷ್ಟು ವಿಸ್ತಾರಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ಸಿಂಥಟಿಕ್ ಟ್ರ್ಯಾಕ್ ನಿರ್ಮಿಸಲಾಗುವುದು ಎಂದರು.
ಸೂಪರಿಂಟೆಂಡೆಂಟ್ ಎಂಜಿನಿಯರ್ ಡಿ. ಬಸವರಾಜ, ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಜಿ. ಕುಲಕರ್ಣಿ, ಐ.ಎಲ್. ಕಳಸಾ, ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಅಧ್ಯಕ್ಷತೆ ವಹಿಸಿದ್ದ ನೌಕರರ ಸಂಘದ ಅಧ್ಯಕ್ಷ ಸದಾಶಿವ ದಳವಾಯಿ, ಪಿ.ಎ. ಹೇಮಗಿರಿಮಠ, ಜಿ.ಎಂ. ಕೊಟ್ಯಾಳ, ಪಿ. ಶಾಂತಾ, ಬಸವರಾಜ ಯರವಿನತೆಲಿಮಠ, ಎಂ.ಆರ್. ಮಕಾನದಾರ್, ಎಸ್.ಐ. ಗಿಡ್ಡಪ್ಪಗೋಳ, ಪಿಎಸ್ ಐ ಇಂಡಿಕರ, ಇನ್ನೀತರರು ಇದ್ದರು.
10 ಕ್ಕೂ ಹೆಚ್ಚು ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಡಿಸ್ ಪ್ಲೇ ನೃತ್ಯ ಗಮನ ಸೆಳೆದವು.
ಜವಾಹರ ನವೋದಯ ವಿದ್ಯಾಲಯದ ಮಕ್ಕಳು ಪ್ರಚುರಪಡಿಸಿದ ಸ್ಕಿಪ್ಪಿಂಗ್ ರೋಪ್ ನಲ್ಲಿ ಕವಾಯತ್ತು ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

You May Also Like

ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ…

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಅನೈತಿಕ ಸಂಬಂಧ : ಪತಿ ಕೊಲೆ, ಇಬ್ಬರ ಬಂಧನ

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.