ಉತ್ತರಪ್ರಭ ಸುದ್ದಿ
ಮುಳಗುಂದ:
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಾಂತೇಶ ಬಾತಾಖಾನಿ, ಎಂ.ಡಿ.ನರಗುoದ, ಸಿ.ಎಸ್.ಪತ್ರಿ, ಮಂಜುನಾಥ ಮಜ್ಜಿಗುಡ್ಡ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಎಂದು ಬಿಜೆಪಿ ಗದಗ ಗ್ರಾಮೀಣ ಮಂಡಲದ ಅಧ್ಯಕ್ಷ ದ್ಯಾಮಣ್ಣ ನೀಲಗುಂದ ಹೇಳಿದರು.
ಈ ಕುರಿತು ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ನಾಲ್ವರು ಬಿಜೆಪಿ ಪಕ್ಷದ ಹೆಸರು ಬಳಸಿಕೊಂಡು ಪಕ್ಷ ವಿರೋಧಿ ಹೇಳಿಕೆಗಳನ್ನ ಪತ್ರಿಕೆಗಳ ಮೂಲಕ ನೀಡಿದ್ದಾರೆ, ಮುಳಗುಂದದ ಜಾತ್ರಾ ಕಾರ್ಯಕ್ರಮವೊಂದಕ್ಕೆ ಕಾಂಗ್ರೆಸ್ ಪಕ್ಷದ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಹೆಸರುಗಳನ್ನ ಆಮಂತ್ರಣ ಪತ್ರಿಕೆಯಲ್ಲಿ ಹಾಕಿ ಅವರನ್ನ ಆವ್ಹಾನಿಸಬೇಕು. ಎಂದು ಈಚೆಗೆ ಪತ್ರಿಕೆ ಮೂಲಕ ಆಗ್ರಹಿಸಿದ್ದರು, ಇದಲ್ಲದೆ ಹಲವು ಭಾರಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಹಿ ಸಂಗ್ರಹಿಸಿ, ಒಮ್ಮತದಿಂದ ಈ ನಾಲ್ವರನ್ನ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಘಟಕದ ಅಧ್ಯಕ್ಷ ಮಲ್ಲಪ್ಪ ಕುಂದಗೋಳ, ಯುವ ಘಟಕದ ಅಧ್ಯಕ್ಷ ಕಿರಣ ಬಾತಾಖಾನಿ, ಮುಖಂಡರಾದ ಮಲ್ಲಪ್ಪ ಬಳ್ಳಾರಿ, ಲಕ್ಷ್ಮಣ ಇಂಗಳಹಳ್ಳಿ, ಅಕ್ಷಯ ಬಟ್ಟೂರ, ಕುಮಾರ ಸುಂಕಾಪೂರ, ದೇವಪ್ಪ ಪಾಟೀಲ, ಬಸವರಾಜ ಬೈಲಪ್ಪನವರ, ನಾಗರಾಜ ಕತ್ತಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಈರುಳ್ಲಿ ಮಾರಟಕ್ಕೆ ಹೋರಟ ರೈತರು ; ಲಾರಿ ಪಲ್ಟಿ ಆಗಿ ರೋಡ್ ಪಾಲಾದ ಈರುಳ್ಳಿ, ನಾಲ್ಕೂ ಜನ ರೈತರ ಸಾವು

ಉತ್ತರಪ್ರಭ ಸುದ್ದಿ ಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ರೈತರು ತಾವು ಬೆಳೆದ ಈರುಳ್ಳಿಯನ್ನು ಮಾರಾಟಕ್ಕೆಂದು ಬೆಂಗಳೂರಿಗೆ…

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.