ಉತ್ತರಪ್ರಭ ಸುದ್ದಿ
ಮುಳಗುಂದ:
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಾಂತೇಶ ಬಾತಾಖಾನಿ, ಎಂ.ಡಿ.ನರಗುoದ, ಸಿ.ಎಸ್.ಪತ್ರಿ, ಮಂಜುನಾಥ ಮಜ್ಜಿಗುಡ್ಡ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಎಂದು ಬಿಜೆಪಿ ಗದಗ ಗ್ರಾಮೀಣ ಮಂಡಲದ ಅಧ್ಯಕ್ಷ ದ್ಯಾಮಣ್ಣ ನೀಲಗುಂದ ಹೇಳಿದರು.
ಈ ಕುರಿತು ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ನಾಲ್ವರು ಬಿಜೆಪಿ ಪಕ್ಷದ ಹೆಸರು ಬಳಸಿಕೊಂಡು ಪಕ್ಷ ವಿರೋಧಿ ಹೇಳಿಕೆಗಳನ್ನ ಪತ್ರಿಕೆಗಳ ಮೂಲಕ ನೀಡಿದ್ದಾರೆ, ಮುಳಗುಂದದ ಜಾತ್ರಾ ಕಾರ್ಯಕ್ರಮವೊಂದಕ್ಕೆ ಕಾಂಗ್ರೆಸ್ ಪಕ್ಷದ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಹೆಸರುಗಳನ್ನ ಆಮಂತ್ರಣ ಪತ್ರಿಕೆಯಲ್ಲಿ ಹಾಕಿ ಅವರನ್ನ ಆವ್ಹಾನಿಸಬೇಕು. ಎಂದು ಈಚೆಗೆ ಪತ್ರಿಕೆ ಮೂಲಕ ಆಗ್ರಹಿಸಿದ್ದರು, ಇದಲ್ಲದೆ ಹಲವು ಭಾರಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಹಿ ಸಂಗ್ರಹಿಸಿ, ಒಮ್ಮತದಿಂದ ಈ ನಾಲ್ವರನ್ನ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಘಟಕದ ಅಧ್ಯಕ್ಷ ಮಲ್ಲಪ್ಪ ಕುಂದಗೋಳ, ಯುವ ಘಟಕದ ಅಧ್ಯಕ್ಷ ಕಿರಣ ಬಾತಾಖಾನಿ, ಮುಖಂಡರಾದ ಮಲ್ಲಪ್ಪ ಬಳ್ಳಾರಿ, ಲಕ್ಷ್ಮಣ ಇಂಗಳಹಳ್ಳಿ, ಅಕ್ಷಯ ಬಟ್ಟೂರ, ಕುಮಾರ ಸುಂಕಾಪೂರ, ದೇವಪ್ಪ ಪಾಟೀಲ, ಬಸವರಾಜ ಬೈಲಪ್ಪನವರ, ನಾಗರಾಜ ಕತ್ತಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…