ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದಕರ ಸಂಗತಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿನ ಸಿಬ್ಬಂದಿಯ ಕಿರುಕುಳವೂ ಹೆಚ್ಚಾಗಿದೆ. ಶಿಕ್ಷಕ ನೋರ್ವ ತಾಲ್ಲೂಕು ಆಡಳಿತ ಕಚೇರಿ ಎದುರೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಸಿಂದಗಿಯಲ್ಲಿ ನಿರ್ಮಾಣವಾಗುವುದಕ್ಕೆ ಕಾರಣೀಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ರೀತಿ ಬಿಇಓ ಹಾಗೂ ಕಚೇರಿ ಸಿಬ್ಬಂದಿಯ ಕಿರುಕುಳ ಹೆಚ್ಚಾದರೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಬಿಇಓ ಅಮಾನತ್ತಿಗೆ ಆಗ್ರಹ;
ಸಿಂದಗಿ ಬಿಇಓ ಅವರನ್ನು ತಕ್ಷಣವೇ ಅಮಾನತ್ತು ಮಾಡಬೇಕು, ಇಲ್ಲದಿದ್ದರೆ ಅವರ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ತಂಬಾಕು ತೀಟೆ ದಾಸರಾದರೆ ಬಾಳೆಲ್ಲ ಗೋಳು-ಶಶಿಕಾಂತ ಕುಮಟಿಹಳ್ಳಿ

ಹೂಲಗೇರಿ: ತಂಬಾಕು ನಿರ್ಮೂಲನಾ ಜಾಗೃತಿ ದಿನಾಚರಣೆ ಕೆರೂರ ( ಬಾಗಲಕೋಟೆ ಜಿಲ್ಲೆ)ಎಲ್ಲ ಭಾಗ್ಯಗಳಲ್ಲೇ ಆರೋಗ್ಯ ಭಾಗ್ಯವೇ…

ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ

ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…