ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದಕರ ಸಂಗತಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿನ ಸಿಬ್ಬಂದಿಯ ಕಿರುಕುಳವೂ ಹೆಚ್ಚಾಗಿದೆ. ಶಿಕ್ಷಕ ನೋರ್ವ ತಾಲ್ಲೂಕು ಆಡಳಿತ ಕಚೇರಿ ಎದುರೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಸಿಂದಗಿಯಲ್ಲಿ ನಿರ್ಮಾಣವಾಗುವುದಕ್ಕೆ ಕಾರಣೀಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ರೀತಿ ಬಿಇಓ ಹಾಗೂ ಕಚೇರಿ ಸಿಬ್ಬಂದಿಯ ಕಿರುಕುಳ ಹೆಚ್ಚಾದರೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಬಿಇಓ ಅಮಾನತ್ತಿಗೆ ಆಗ್ರಹ;
ಸಿಂದಗಿ ಬಿಇಓ ಅವರನ್ನು ತಕ್ಷಣವೇ ಅಮಾನತ್ತು ಮಾಡಬೇಕು, ಇಲ್ಲದಿದ್ದರೆ ಅವರ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಶರಣ ಧರ್ಮ,ವಚನ ಸಾಹಿತ್ಯ ರಕ್ಷಕ ಮಾಚಿದೇವರು

ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ…

ಆಗಷ್ಟ 5 ರಿಂದ 8 ದಿನಗಳಕಾಲ ಆಲಮಟ್ಟಿ ಟೂ ತಾಳಿಕೋಟಿ ಯುವಜನ ಸಂಕಲ್ಪ ನಡಿಗೆ ಯಾತ್ರೆ

20 ಸಾವಿರ ಯುವಕ-ಯುವತಿಯರಿಗೆ ಸಮವಸ್ತ್ರ ವಿತರಣೆ- ಆಲಮಟ್ಟಿಯಲ್ಲಿ ಶಾಸಕ ನಡಹಳ್ಳಿ ಚಾಲನೆಉತ್ತರಪ್ರಭಆಲಮಟ್ಟಿ: 75 ನೇ ಸ್ವಾತಂತ್ರ್ಯ…

ರೈತರು ಬೆಳೆಗೆ ಬೆಳೆ ಮಾರಾಟಕ್ಕೆ ಡಿಕೆಶಿ ಮನವಿ

ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್…

ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಎಂ.ಎಚ್.ಎಂ. ಚಿಣ್ಣರು…!

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿಯ ವಿವಿಧ ಸ್ಪಧೆ೯ಗಳಲ್ಲಿ ಸ್ಥಳೀಯ…