ಆಲಮಟ್ಟಿ; ಜಿಲ್ಲೆಯ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕೈಗೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ಸೋಮವಾರ ಹಲವಾರು ಕಾರ್ಯಕರ್ತರು ಸುಮಾರು ಅರ್ಧ ಕಿ.ಮೀ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ಕಳೆದ ಏಳು ದಿನಗಳಿಂದ ಪಾದಯಾತ್ರೆಯ ಮೂಲಕ ಆಗಮಿಸಿ ಇಲ್ಲಿಯ ಕೆಬಿಜೆಎನ್ ಎಲ್ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲೆಯ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲಮಟ್ಟಿ ಕೆಬಿಜೆಎನ್ ಎಲ್ ಮುಖ್ಯ ಎಂಜನಿಯರ್ ಕಚೇರಿ ಮುಂಭಾಗದಲ್ಲಿ ಸೋಮವಾರ ಕನಾ೯ಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಿದರು.


ಸೋಮವಾರ, ಅರ್ಧ ಕಿ.ಮೀ ಉದ್ದದವರೆಗೂ ಸುಮಾರು 20 ಕ್ಕೂ ಹೆಚ್ಚು ಜನ ಉರುಳು ಸೇವೆ ನಡೆಸಿದರು. ಪ್ರತಿಭಟನಾ ಸ್ಥಳದಿಂದ ಮುಖ್ಯ ಎಂಜಿನಿಯರ್ ಕಚೇರಿ‌ ಮುಂಭಾಗದವರೆಗೂ ಉರುಳು ಸೇವೆ ನಡೆಸಿದರು. ಜಿಲ್ಲೆಯ ರೈತರ ತ್ಯಾಗದ ಫಲವಾಗಿ ಅಣೆಕಟ್ಟು ನಿರ್ಮಾಣವಾಗಿದೆ. ಹೀಗಾಗಿ ಜಿಲ್ಲೆ ಸಂಪೂರ್ಣ ನೀರಾವರಿಗೊಳಪಡಬೇಕು, ಸಂತ್ರಸ್ತರ ಆರ್ಥಿಕ ಅಭಿವೃದ್ಧಿಗೆ ವಿಶೇಷ ಅನುದಾನ ಯೋಜನೆ ಜಾರಿಗೆ ತರಬೇಕು, ಆಲಮಟ್ಟಿಯ ಅರಣ್ಯ ಜಾಗೆಯಲ್ಲಿ ಕಳೆದ 40 ವರ್ಷಗಳಿಂದ ವಾಸಿಸುತ್ತಿರುವ ನಿವಾಸಿಗಳ ನಿವೇಶನ ಸಕ್ರಮಕ್ಕೆ ಕ್ರಮ‌ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಶೀಲನೆ ಮಾಡಬೇಕು ಎಂದರು.
ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ ಆಲೂರ, ಸೀತಪ್ಪ ಗಣಿ, ಸಂಗಮೇಶ ಹೊನಕಟ್ಟಿ, ಮುರಿಗೆಪ್ಪ ತುಪ್ಪದ, ವೆಂಕಟೇಶ ವಡ್ಡರ, ಅಬ್ದುಲ್ ರೆಹಮಾನ್ ತಾಳಿಕೋಟೆ, ಗುಂಡಕ್ಕ ವಡ್ಡರ ಇನ್ನೀತರರು ಇದ್ದರು.
ಪೋಟೋ : ಜಿಲ್ಲೆಯ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲಮಟ್ಟಿ ಕೆಬಿಜೆಎನ್ ಎಲ್ ಮುಖ್ಯ ಎಂಜನಿಯರ್ ಕಚೇರಿ ಮುಂಭಾಗದಲ್ಲಿ ಸೋಮವಾರ ಕನಾ೯ಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಶಾಂತೂ ಎಂಬ ಕಾಯಕ ಪ್ರಜ್ಞೆ ಜೀವದ ಸೇವಾ ಕೈಂಕರ್ಯ ಅನನ್ಯ…!!!

ಆಲಮಟ್ಟಿ : ಕಾಯಕ ನಿಷ್ಟೆ,ಕಾಯಕ ಪ್ರಜ್ಞೆ ಪದಕ್ಕೆ ಪ್ರಸನ್ನ ಭಾವದ ಶಾಂತೂ ತಡಸಿ ವಿಶೇಷ ಮೌಲ್ಯ…

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಪಲ್ಟಿ

ಉತ್ತರಪ್ರಭ ಸುದ್ದಿ ಗದಗ: ಪಟ್ಟಣದ ದಿಂದ ಬಳಗಾನೂರು ಗ್ರಾಮಕ್ಕೆ ಹೊರಟ್ಟಿದ್ದ NWKSRTC ಬಸ್ ವೊಂದು ಪಲ್ಟಿಯಾಗಿ…