ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌ ಶಾಸಕ ಪ್ರತಾಪಗೌಡ ಪಾಟೀಲ‌ ಅವರು ಕರೆ‌ ನೀಡಿದರು. ತಾಲೂಕಿನ ಗುಂಡಾ ಗ್ರಾಪಂ ವ್ಯಾಪ್ತಿಯ ಗುಡಿಹಾಳ ಗ್ರಾಮದಲ್ಲಿ ಬೂತ್ ಮಟ್ಟದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ದೇಶ ಮೊದಲು, ನಂತರ ಪಕ್ಷ ಎಂಬ ಮೌಲ್ಯಾಧಾರಿತ ರಾಜಕಾರಣ ಮಾಡಲು ಬಿಜೆಪಿಗೆ ಮಾತ್ರ ಸಾಧ್ಯ.

ದೇಶ ಮೊದಲು, ನಂತರ ಪಕ್ಷ ಎಂಬ ಮೌಲ್ಯಾಧಾರಿತ ರಾಜಕಾರಣ ಮಾಡಲು ಬಿಜೆಪಿಗೆ ಮಾತ್ರ ಸಾಧ್ಯ:ಮಾಜಿ‌‌ ಶಾಸಕ ಪ್ರತಾಪಗೌಡ ಪಾಟೀಲ‌

ವಿಷಯಾಧಾರಿತ ಹೋರಾಟಗಳಿಗೆ ನ್ಯಾಯ ಒದಗಿಸುವ ನಾಯಕರು ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿದ್ದಾರೆ. ಜನಸಾಮಾನ್ಯರು, ರೈತರು, ದುಡಿಯುವ ವರ್ಗ, ಮಹಿಳೆಯರು ಎಲ್ಲ ವರ್ಗದ ಜನರು ಬಿಜೆಪಿ ಬಗ್ಗೆ ಆಶಾಭಾವನೆಯನ್ನು ಹೊಂದಿದ್ದಾರೆ. ಭಾರತವನ್ನು ಬಲಿಷ್ಠವಾಗಿಸುವ ಶಕ್ತಿ ಬಿಜೆಪಿ ಪಕ್ಷಕ್ಕೆ ಮಾತ್ರ ಇದೆ. ಜನರ ಒಳಿತಿಗಾಗಿ ಸೂಕ್ಷ್ಮವಾದ ನಿರ್ಣಯಗಳನ್ನು ಕೈಗೊಂಡ ಕೇಂದ್ರ ಸರ್ಕಾರ ಉಜ್ವಲ ಯೋಜನೆ, ಜಲಜೀವನ ಮಿಷನ್‌ನಂಥ ಮಹತ್ವದ ಯೋಜನೆಗಳನ್ನು ಜಾರಿಮಾಡಿತು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ದೀನದಯಾಳ್ ವಿದ್ಯುತ್ ಯೋಜನೆ, ಮುದ್ರಾ, ಕೃಷಿ ಸಮ್ಮಾನ್, ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತವನ್ನು ನೀಡಲಾಗುತ್ತಿದೆ. ವಿಶ್ವದ ಅನೇಕ ಬಲಿಷ್ಠ ರಾಷ್ಟ್ರಗಳು ಕೋವಿಡ್‌ನಿಂದ ಆರ್ಥಿಕ ಸಂಕಷ್ಟವನ್ನು ಕಾಣುತ್ತಿದ್ದರೆ, ಭಾರತ ದೇಶ ಶೇ.7 ರ ನಿರಂತರ ಬೆಳವಣಿಗೆಯನ್ನು ಕಾಣುತ್ತಿದೆ. ಜನರ ಪ್ರಾಣ ಉಳಿಸಿ, ಅವರಿಗೆ ಆಹಾರ, ಆರೋಗ್ಯ ಕೇಂದ್ರ ಸರಕಾರ ಕಲ್ಪಿಸಿದೆ ಎಂದರು. ಈ ಸಂದರ್ಭದಲ್ಲಿ ಸೋಮನಗೌಡ, ನಿಂಗಪ್ಪ ಗುಡಿಹಾಳ, ಯಂಕನಗೌಡ ಹಡಗಲಿ, ಉಪ್ಪಲದೊಡ್ಡಿ ನಿರುಪಾದಿ ಊರಿನ ಗುರುಹಿರಿಯರು ಕಾರ್ಯಕರ್ತರು ಯುವ ಮಿತ್ರರು ಇನ್ನಿತರ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಮೋದಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್!

ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ರಳ್ಳಿ ವಡ್ಡರಪಾಳ್ಯ ಸಮಸ್ಯೆ ವಾರದೊಳಗೆ ಪರಿಹರಿಸದಿದ್ರೆ ಹೋರಾಟ: ರವಿಕಾಂತ ಅಂಗಡಿ

ದಶಕದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಆದ್ರಳ್ಳಿಯ ವಡ್ಡರಪಾಳ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆಡಳಿತ ವರ್ಗ ಮುಂದಾಗಬೇಕು.

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.