ಉತ್ತರಪ್ರಭ ಸುದ್ದಿ ಗದಗ:

ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ) ಪ್ರತಿನಿಧಿಗಳ ಮೇಲೆ ಅಭಿವೃದ್ಧಿ ಅಧಿಕಾರಿ ಅವಹೇಳನವಾಗಿ ದರ್ಪ ತೋರಿರುವ ಘಟನೆ ಇದಾಗಿದೆ.

ಈ ಕೂರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತಿಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸೋಮು ಲಮಾಣಿ ದಿ. 3.4.2023ರಂದು ನಾನು ಎಲ್.ಐ.ಸಿ ಕಛೇರಿಯಲ್ಲಿ ಹಣ ಪಾವತಿಸಲು ಹೋದ ಸಮಯದಲ್ಲಿ ಏಕಾ ಏಕಿ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ.ಸಿದ್ದಾರ್ಥನ್ ಬಂದು ನಿನು ಪ್ರತಿನಿಧಿಗಳ ಸಂಘದ ಅಧ್ಯಕ್ಷನಾದರೆ ದೋಡ್ಡವನೆ, ನಾನು ಇಲ್ಲಿನ ಅಧಿಕಾರಿ, ಎಂದು ಏಕ ವಚನದಲ್ಲಿ ಮಾತನಾಡುವದಲ್ಲದೆ, ನಿನ್ನ ಕೇಲಸವನ್ನು ಹೇಗೆ ಮಾಡುತ್ತಿಯಾ ನೋಡೊನ ಎಂದು ಅವಹೇಳಿಸಿದ್ದಾರೆ. 

ಇವರಿಗೆ ಕನಿಷ್ಠ ತಿಳಿವಳಿಕೆ ಇಲ್ಲದ ರೀತಿಯಲ್ಲಿ ನಿಂಧನೆ ಮಾಡಿದ್ದು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಅವಮಾನ ಮಾಡಿರುತ್ತಾರೆ ಹಾಗೂ ಎಲ್ಲಾ ಪ್ರತಿನಿಧಿಗಳಿಗೆ ಶೋಷಣೆ ಮಾಡುತ್ತಾ ಬಂದಿರುವದನ್ನು ಬಲವಾಗಿ ಖಂಡಿಸುತ್ತೆನೆ, ಅವರು ಹೀರಿಯ ಅಧಿಕಾರಿಯಾಗಿದ್ದು ಅವರ ವಯಸ್ಸಿಗೆ ಶೋಭೆ ತರುವಂತಹದಲ್ಲಾ. ಸಂಘದ  ಶ್ರಯೋಭಿವೃದ್ಧಿಗೆ ಸಹಿಸದೆ, ಈ ರೀತಿ ಅಪಮಾನ ಮಾಡಿರುತ್ತಾರೆ, ಈ ಕೂಡಲೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಾಮಾಜಿಕ ಹೋರಾಟದೊಂದಿಗೆ, ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.

ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಉತ್ತರಪ್ರಭ ಫಲಶೃತಿ: ಕಟ್ಟಿಗೆ ಅಡ್ಡೆ ಮಾಲಿಕರಿಗೆ ಮೂರು ದಿನದ ಗಡುವು ಕೊಟ್ಟ ತಹಸೀಲ್ದಾರ್!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.ತಹಶೀಲ್ದಾರ,…

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.