ಉತ್ತರಪ್ರಭ, ಗದಗ :
ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ಇವರನ್ನು ತಕ್ಷಣವೆ ಜಾರಿಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಗೋವಿಂದ ರೆಡ್ಡಿ, (ಐಎಎಸ್)
ಗೋವಿಂದ ರೆಡ್ಡಿ,(ಐಎಎಸ್):
ಹೌದು ಮಂಗಳವಾರ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿರನ್ನು ಕೆವಲ ತಮ್ಮ ಆರು ತಿಂಗಳ ಅವಧಿಯಲ್ಲಿದ್ದ ಇವರನ್ಮು ಯಾವುದೇ ಹುದ್ದೆಗೆ ನೇಮಿಸದೆ ವರ್ಗಾವಣೆ ಮಾಡಲಾಗಿದೆ. ಹಾಗೂ ಇವರ ಸ್ಥಾನಕ್ಕೆ ಸಾಮಾಜಿಕ ಲೆಕ್ಕ ಪರಿಶೋಧಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಾಗಿದ್ದ ಸಿ.ಎನ್.ಶ್ರೀಧರ ಇವರನ್ನು ನೇಮಕಮಾಡಿ ತಕ್ಷಣವೇ ಜಾರಿಗೆಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿ.ಎನ್.ಶ್ರೀಧರ, (ಐಎಎಸ್):
ಇವರು 2022ರಲ್ಲಿ ಕೆಎಎಸ್ ಇಂದ ಐಎಎಸ್ ಗೆ ಬಡ್ತಿ ಹೊಂದಿದ್ದು, ಇವರು ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ, ಕಂದಾಯ ಇಲಾಖೆಯಲ್ಲಿ ಸರ್ವೆ ಮತ್ತು ಸೆಟಲ್ಮೆಂಟ್ ಆಯುಕ್ತರಾಗಿ, ಮತ್ತು ಹಾಲಿ ಸಾಮಾಜಿಕ ಲೆಕ್ಕ ಪರಿಶೋಧಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು ಹೀಗೆ ಅನೇಕ ಇಲಾಖೆಯ ಆಡಳಿತದಲ್ಲಿ ಅನುಭವಿಗಳಾಗಿದ್ದಾರೆ. ಸದ್ಯ ಇವರ ನಿವೃತ್ತುಗೆ ಕೊನೆಯ ಎರಡು ವರ್ಷ ಬಾಕಿ ಇದ್ದು ಇವರನ್ನು ಗದಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಲಾಗಿದೆ.
ಸರ್ಕಾರದ ಆದೇಶ ಪ್ರತಿ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.