ಉತ್ತರಪ್ರಭ, ಗದಗ :
ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ  ಗದಗ, ಬಳ್ಳಾರಿ, ಬೀದರ, ಬೆಂಗಳೂರು, ರಾಯಚೂರು, ಬೆಳಗಾವಿ, ತುಮಕೂರು, ಚಿಕ್ಕಮಗಳೂರು, ಈ ಎಂಟು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ, ಕಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ಕಛೆರಿ, ಮನೆಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಲಾಗಿದೆ.


ಗದಗ : ಹುಚ್ಚೇಶ್ ಬಂಡಿವಡ್ಡರ್ (ಎಇಇ ನಗರಸಭೆ)
ಗದಗ-ಬೆಟಗೇರಿ ನಗರಸಭೆ ಕಾರ್ಯನಿರ್ವಾಹಕ ಇಂಜಿನಿಯರ್  ಗೆ ಸೇರಿದ ಗದಗ, ಗಜೇಂದ್ರಗಡ, ಬಾಗಲಕೋಟೆ ಈ ಮೂರುಕಡೆ ಲೋಕಾಯುಕ್ತ ಎಸ್ ಪಿ ಹನಮಂತರಾಯ್, ಡಿವೈಎಸ್ ಪಿ ವಿಜಯ್ ಬಿರಾದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಇನ್ಸಪೆಕ್ಟರ್ ಪರಮೇಶ್ ಕವಟಗಿ, ಪಿಎಸ್ ಐ ಎಸ್ ಎಸ್ ತೇಲಿ ಸೇರಿದಂತೆ ಧಾರವಾಡ ಲೋಕಾ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

ಬಳ್ಳಾರಿ : ಆರ್ ಹೆಚ್ ಲೋಕೇಶ್
ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣ ಅಧಿಕಾರಿ ಆರ್ ಹೆಚ್ ಲೋಕೇಶ್ ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ಬೆಳಗಾವಿ: ಖಾನಾಪುರ ತಹಶಿಲ್ದಾರ ಗಾಯಕವಾಡ
ಬೆಳಗಾವಿ ಜಿಲ್ಲೆಯ ಖಾನಾಪುರ ತಹಶಿಲ್ದಾರ ಪ್ರಕಾಶ್ ಶ್ರೀಧರ್ ಗಾಯಕವಾಡ ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಜಂಟಿ ನಿರ್ದೇಶಕಿ ಶೋಭಾ (ಸಾರಿಗೆ ಇಲಾಖೆ)
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ, ಕಛೇರಿ ಸೇರಿ ಹಲವೆಡೆ ದಾಳಿ ನಡೆಸಲಾಗಿದೆ.

ಬೀದರ್: ಇಂಜಿನಿಯರ್ ರವೀಂದ್ರ
ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರವೀಂದ್ರ ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ತುಮಕೂರು: ಎಸ್.ರಾಜು (ನಿವೃತ್ತ ಆರ್.ಟಿ.ಓ)
ತುಮಕೂರು ಜಿಲ್ಲೆಯ ನಿವೃತ್ತ ಅರ್ ಟಿ ಓ ಅಧಿಕಾರಿ ಎಸ್.ರಾಜು ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ಚಿಕ್ಕಮಗಳೂರು: ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್
ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ರಾಯಚೂರು: ಹುಲಿರಾಜ್ (ಬೆಸ್ಕಾಂ ಜೆಇ)
ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ, ಕಛೆರಿ ಹಾಗೂ ಇವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿದೆ.

ಈ ಎಂಟು ಜಿಲ್ಲೆಯ ಅಧಿಕಾರಿಗಳ ಮನೆ, ಕಛೇರಿ ಹಾಗೂ ಮಾಹಿತಿ ಮೇರೆಗೆ ಇವರ ಆಪ್ತರು, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಲಾಗಿದೆ. ದಾಳಿಯ ಬಳಿಕ ಎಲ್ಲ ದಾಖಲೆಗಳ ಪರಿಶೀಲನೆ ಮಾಡಿ ನಂತರ ಈ ಅಧಿಕಾರಿಳ ಅಕ್ರಮ ಆಸ್ತಿಗಳ ಮಾಹಿತಿಯನ್ನು ತಿಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…

15 ದಿನದಲ್ಲಿ ಬಾಕಿ ತೆರಿಗೆ ವಸೂಲಿ ಮಾಡಿ : ನಗರಸಭೆಗೆ ಡಿಸಿ ಸೂಚನೆ

ಗದಗ ಬೆಟಗೇರಿ ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶಬಾಬು ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಅವಳಿ ನಗರದ ಎಲ್ಲ ಮುಖ್ಯ ರಸ್ತೆಗಳ ತೆರೆದ ಗುಂಡಿಗಳನ್ನು ತಕ್ಷಣವೇ ಮುಚ್ಚಲು ನಿರ್ದೇಶನ ನೀಡಿದರು.

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.