ಉತ್ತರಪ್ರಭ ಗದಗ :

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ ರಾಜಕೀಯ ಹಕ್ಕೊತ್ತುವರಿ..!

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆ ನಡೆಯಿತು. ಈ ಸಂದರ್ಭ ನಗರಸಭೆ ಕಚೇರಿ ಮುಂದೆ ಭಾರಿ ಹೈಡ್ರಾಮಾ ಸೃಷ್ಟಿಯಾಯಿತು.

ನಾಮಪತ್ರ ಸಲ್ಲಿಸಲು ನಗರಸಭೆ ಕಚೇರಿ ಬಳಿ ಆಗಮಿಸಿದ್ದ ಬಿಜೆಪಿಯ ಸದಸ್ಯರು, ಕಾರ್ಯಕರ್ತರು, ಹಾಗೂ ಪ್ರಮುಖ ನಾಯಕರು ಪ್ರವೇಶದ ನಾಕಾಬಂದಿಗೆ ಸಿಲುಕಿದರು.

ನಗರಸಭೆ ಅಧಿಕಾರಿಗಳು ಸದಸ್ಯರಿಗೆ ಮಾತ್ರ ಪ್ರವೇಶ ನೀಡುವ ನಿಯಮವನ್ನು ಮುಂದಿಟ್ಟುಕೊಂಡು, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹಾಗೂ ಸ್ಥಳೀಯ ನಾಯಕರನ್ನು ನಗರಸಭೆ ಗೇಟ್ ಬಳಿ ತಡೆ ನೀಡಿದರು.

ಬಿಜೆಪಿ ಕಾರ್ಯಕರ್ತರು, ಪೊಲೀಸರ ಜತೆ ವಾಗ್ವಾದಕ್ಕಿಳಿದರೆ, ಸಚಿವ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು, ಪೊಲೀಸರ ಜತೆ ವಾಗ್ವಾದಕ್ಕಿಳಿದರೆ, ಸಚಿವ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಯು ಈಗ ಗದಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ :

ಬಿಜೆಪಿಯ ಅಭ್ಯರ್ಥಿಗಳು :

  • ಅಧ್ಯಕ್ಷ ಸ್ಥಾನಕ್ಕೆ : ಚಂದ್ರಶೇಖರ ತಡಸದ್
  • ಉಪಾಧ್ಯಕ್ಷೆ ಸ್ಥಾನಕ್ಕೆ : ವಿಜಯಲಕ್ಷ್ಮೀ ದಿಂಡೂರು

ಕಾಂಗ್ರೆಸ್ ಅಭ್ಯರ್ಥಿಗಳು :

  • ಅಧ್ಯಕ್ಷ ಸ್ಥಾನಕ್ಕೆ : ಕೃಷ್ಣಾ ಪರಾಪುರ್
  • ಉಪಾಧ್ಯಕ್ಷ ಸ್ಥಾನಕ್ಕೆ : ಶಕುಂತಲಾ ಅಕ್ಕಿ

ಈ ಬೆಳವಣಿಗೆಗಳಿಂದ ಗದಗ-ಬೆಟಗೇರಿ ನಗರಸಭೆ ರಾಜಕೀಯವಾಗಿ ಬಿಸಿಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಮುಖಾಮುಖಿ ಹೋರಾಟ ತೀವ್ರ ಸ್ವರೂಪ ತಾಳಲಿದೆ ಎಂಬುದು ಸ್ಪಷ್ಟವಾಗಿದೆ.

Leave a Reply

Your email address will not be published. Required fields are marked *

You May Also Like

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..

ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ

ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…