ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ
ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ
ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.