ಅಡರಕಟ್ಟಿ ವಿಎಸ್ಎಸ್ ಸಂಘಕ್ಕೆ ಅವಿರೋಧ ಆಯ್ಕೆ

ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ ಮಾಡಲಾಯಿತು.

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.