ವಿಜಯನಗರ ಜಿಲ್ಲೆ: ಇಭ್ಭಾಗವಾಗಲಿದೆ ಮೈಸೂರು ರಾಜ್ಯದ ಗಡಿ …!

ಬಳ್ಳಾರಿ ಜಿಲ್ಲೆಯ ಗರ್ಭಸಂಜಾತ ಶಿಶುವಾಗಿ ಹುಟ್ಟಲು ವಿಜಯನಗರ ಜಿಲ್ಲೆಗೆ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಇದು ಒಂದೆಡೆ ಸಚಿವ ಆನಂದ ಸಿಂಗ್ ರವರ ಕನಸುಗಳಿಗೆ ರೆಕ್ಕೆ ಬರಿಸಿದ್ದರೆ, ಮತ್ತೊಂದೆಡೆ ರಾಜಕೀಯ ಅಸ್ತಿತ್ವಕ್ಕಾಗಿ ಪರದಾಡುತ್ತಿದ್ದ ಆತ್ಮಗಳ ನಿದ್ದೆಗೆಡಿಸಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಾಂಸ್ಕೃತಿಕ ಚಿಂತಕರ ಮನಸ್ಸು ಕೂಡ ಒಪ್ಪುತ್ತಿಲ್ಲವಾದರೂ, ಜಿಲ್ಲಾ ಕೇಂದ್ರ ‘ದೂರ’ ಅನ್ನುವ ಚಡಪಡಿಕೆ ಅವರ ಧ್ವನಿಯನ್ನು ಹತ್ತಿಕ್ಕಿರುವುದು ಸುಳ್ಳೇನಲ್ಲ…!

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.