Browsing Tag
ಕರ್ನಾಟಕ
204 posts
ಆಹಾರದ ಅವಶ್ಯಕತೆ
ಪ್ರತಿ ಜೀವಿಯ ಜೀವನಾಧಾರವೇ ಅದರ ಹೊಟ್ಟೆಯ ಹಸಿವು, ಆಹಾರ ಇಲ್ಲದೇ ಹೋದರೆ ಪ್ರಾಣ ಪಕ್ಷಿಯೇ ಹಾರಿಹೋಗುವುದಂತು ಗ್ಯಾರಂಟಿ ಎನ್ನುವದಂತು ದಿಟ್ಟ ಎನ್ನುವ ವಿಚಾರಗಳನ್ನು ತಮ್ಮ ಮುಂದೆ ಹಂಚಿಕೊಳ್ಳುತ್ತ, ಇಂದಿನ ದಿನಮಾನಗಳಲ್ಲಿ ಮನುಷ್ಯರಿಗೆ ಆಹಾರ ಅವಶ್ಯಕತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1945 ರಲ್ಲಿ ವಿಶ್ವಸಂಸ್ಥೆಯ ಕೃಷಿ ವಿಭಾಗದ ಸ್ಥಾಪನೆಯ ಸವಿ ನೆನಪಿಗಾಗಿ ಅ.16 ರ ಈ ದಿನವನ್ನು ಹಸಿವಿನ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಯಿತು. 1981 ರ ನಂತರ ಈ ದಿನವನ್ನು ವ್ಯಾಪಕವಾಗಿ ವಿಶ್ವ ಆಹಾರ ದಿನವನ್ನಾಗಿ ವಿಶ್ವಾದ್ಯಾಂತ ಆಚರಣೆ ಮಾಡುವ ಮೂಲಕ ಜಾರಿಗೆ ತರಲಾಯಿತು. ಅಂದರೆ ಅ.16 ರಂದು ವಿಶ್ವಾದ್ಯಾಂತ ವಿಶ್ವ ಆಹಾರ ದಿನವನ್ನಾಗಿ ನಾವೆಲ್ಲರೂ ಸೇರಿ ಆಚರಣೆ ಮಾಡುತ್ತಿದ್ದೇವೆ. ಆದಕಾರಣ ಈ ದಿನದ ನಿಮಿತ್ತ ಭಕ್ಷ್ಯ ಭೋಜನವನ್ನು ಸವಿದು, ಆಹಾರ ಸಂಸ್ಕೃತಿಯನ್ನು ಸಂಭ್ರಮದಿಂದ ನೆನಪಿಸಿ, ತಿಂದು ತೇಗಲು ಈ ದಿನವನ್ನು ಆಚರಿಸಲು ಕರೆ ಕೊಡಲಾಗಿದೆ ಎಂದು ಭಾವಿಸಿದ್ದರೆ. ಅದು ನೂರಕ್ಕೆ ನೂರರಷ್ಟು ತಪ್ಪು. ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಕುರಿತು ಜಾಗೃತಿ, ಅಭಿಯಾನ ಜೊತೆಗೆ ಹಸಿವಿನಿಂದ ಸಾಯುವವರ ನೋವಿನ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ, ತಲುಪಿಸುವ ಏಕೈಕ ಉದ್ದೇಶದ ಜೊತೆಗೆ ಆಹಾರ ಸಮಸ್ಯೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತು ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಜನತೆಗೆ ಜನಜಾಗೃತಿ ಅಭಿಯಾನ, ಗೋಷ್ಠಿ, ವಿಚಾರ ಸಂಕೀರ್ಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ತಿಳಿ ಹೇಳಲು ಆಹಾರ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ
ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.
ಖಾಸಗಿ ಬಸ್ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.
ಕೊರೊನಾ ಹಿನ್ನೆಲೆ : ತಿಮ್ಮಪ್ಪನ ದರ್ಶನ ತಾತ್ಕಾಲಿಕ ತಡೆ
ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್ ವಿತರಿಸಲಾಗುತ್ತದೆ.
ಶುದ್ಧ ನೀರು ಪೂರೈಕೆಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಒತ್ತಾಯ
ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ.
ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ
ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ
ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು