ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.