ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರೈತ ನಾಯಕ ಪ್ರೋ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರಡ್ಡಿ ಬಣದ ಸಂಘಕ್ಕೆ ತಾಲ್ಲೂಕಿನ ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.