ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.