ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ಆಹಾರದ ಅವಶ್ಯಕತೆ

ಪ್ರತಿ ಜೀವಿಯ ಜೀವನಾಧಾರವೇ ಅದರ ಹೊಟ್ಟೆಯ ಹಸಿವು, ಆಹಾರ ಇಲ್ಲದೇ ಹೋದರೆ ಪ್ರಾಣ ಪಕ್ಷಿಯೇ ಹಾರಿಹೋಗುವುದಂತು ಗ್ಯಾರಂಟಿ ಎನ್ನುವದಂತು ದಿಟ್ಟ ಎನ್ನುವ ವಿಚಾರಗಳನ್ನು ತಮ್ಮ ಮುಂದೆ ಹಂಚಿಕೊಳ್ಳುತ್ತ, ಇಂದಿನ ದಿನಮಾನಗಳಲ್ಲಿ ಮನುಷ್ಯರಿಗೆ ಆಹಾರ ಅವಶ್ಯಕತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1945 ರಲ್ಲಿ ವಿಶ್ವಸಂಸ್ಥೆಯ ಕೃಷಿ ವಿಭಾಗದ ಸ್ಥಾಪನೆಯ ಸವಿ ನೆನಪಿಗಾಗಿ ಅ.16 ರ ಈ ದಿನವನ್ನು ಹಸಿವಿನ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಯಿತು. 1981 ರ ನಂತರ ಈ ದಿನವನ್ನು ವ್ಯಾಪಕವಾಗಿ ವಿಶ್ವ ಆಹಾರ ದಿನವನ್ನಾಗಿ ವಿಶ್ವಾದ್ಯಾಂತ ಆಚರಣೆ ಮಾಡುವ ಮೂಲಕ ಜಾರಿಗೆ ತರಲಾಯಿತು. ಅಂದರೆ ಅ.16 ರಂದು ವಿಶ್ವಾದ್ಯಾಂತ ವಿಶ್ವ ಆಹಾರ ದಿನವನ್ನಾಗಿ ನಾವೆಲ್ಲರೂ ಸೇರಿ ಆಚರಣೆ ಮಾಡುತ್ತಿದ್ದೇವೆ. ಆದಕಾರಣ ಈ ದಿನದ ನಿಮಿತ್ತ ಭಕ್ಷ್ಯ ಭೋಜನವನ್ನು ಸವಿದು, ಆಹಾರ ಸಂಸ್ಕೃತಿಯನ್ನು ಸಂಭ್ರಮದಿಂದ ನೆನಪಿಸಿ, ತಿಂದು ತೇಗಲು ಈ ದಿನವನ್ನು ಆಚರಿಸಲು ಕರೆ ಕೊಡಲಾಗಿದೆ ಎಂದು ಭಾವಿಸಿದ್ದರೆ. ಅದು ನೂರಕ್ಕೆ ನೂರರಷ್ಟು ತಪ್ಪು. ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಕುರಿತು ಜಾಗೃತಿ, ಅಭಿಯಾನ ಜೊತೆಗೆ ಹಸಿವಿನಿಂದ ಸಾಯುವವರ ನೋವಿನ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ, ತಲುಪಿಸುವ ಏಕೈಕ ಉದ್ದೇಶದ ಜೊತೆಗೆ ಆಹಾರ ಸಮಸ್ಯೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತು ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಜನತೆಗೆ ಜನಜಾಗೃತಿ ಅಭಿಯಾನ, ಗೋಷ್ಠಿ, ವಿಚಾರ ಸಂಕೀರ್ಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ತಿಳಿ ಹೇಳಲು ಆಹಾರ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾ ಹಾಗು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಚಿಂತನೆ: ಸಚಿವ ಈಶ್ವರಪ್ಪ

ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ನಡೆಯಬೇಕಿದ್ದ ಜಿಲ್ಲಾ ಹಾಗು ತಾಲೂಕು ಪಂಚಾಯತಿ ಚುನಾವಣೆಗಳನ್ನು‌ ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.

ನಟ ದ್ವಾರಕೀಶ್ ಪತ್ನಿ ನಿಧನ

ನಟ, ನಿರ್ಮಾಪಕ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ಶುಕ್ರವಾರ ನಿಧನ ಹೊಂದಿದ್ದಾರೆ.

ಸಾರಿಗೆ ಮುಷ್ಕರ: ಕೋಡಿಹಳ್ಳಿ ಅವರಿಗೆ 10 ಲಕ್ಷ ಪರಿಹಾರ ಕೇಳಿದ ವಿದ್ಯಾರ್ಥಿನಿ

ಬೇಡಿಕೆ ಇಡೆರಿಕೆಗೆ ಒತ್ತಾಯಿಸಿ ಏ.7 ರಿಂದಲೇ ರಾಜ್ಯವ್ಯಾಪಿ ಎಲ್ಲ ನಿಗಮಗಳಲ್ಲಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಹಿನ್ನೆಲೆ ಸರ್ಕಾರಿ ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಸಾರಿಗೆ ನೌಕರರ ಮುಷ್ಕರ ಕಾರಣದಿಂದ ಖಾಸಗಿ ವಾಹನಗಳಿಗೆ ಪ್ರಯಾಣಿಕರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ಶುದ್ಧ ನೀರು ಪೂರೈಕೆಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಒತ್ತಾಯ

ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್‌ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.