ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ : ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಿರ್ವಹಣೆಗಾಗಿ ಏನೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತೋ ಆ ಕೆಲಸ ಸರ್ಕಾರ ಮಾಡಲಿಲ್ಲ. ಈಗಲೂ ಮಾಡಿಕೊಂಡಿಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಆಕ್ಸಿಜನ್ ಬೆಡ್, ಐಸಿಯು ಬೆಡ್ ಸಿಗ್ತಿಲ್ಲ. ಇದರಿಂದ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ.