ಯಾರ ಜಪ್ತಿಗೂ ಸಿಗದ ನವಿಲುಗಳು ದೇವನೂರು ಮಹಾದೇವ ಅವರು..!

ದೇವನೂರರ ಕೃತಿ ಮತ್ತು ಇವರ ಬಗ್ಗೆ ಸಾಹಿತಿಗಳು, ಮಿತ್ರರು, ಕುಟುಂಬದವರು ಬರೆದಿರುವ, ಹೇಳಿರುವ ನೆನಪುಗಳು, ಕೃತಿಗಳ ಬಗ್ಗೆ ಹಿರಿಯ ಸಾಹಿತಿಗಳ ಅನಿಸಿಕೆಗಳು, ಸ್ನೇಹಿತರು ಬರೆದಿರುವ ಪತ್ರಗಳು, ಛಾಯಾಚಿತ್ರಗಳಿಂದ ಕೂಡಿದ್ದು, ಒಂದು ರೀತಿಯ ಅಭಿನಂದನಾ ಗ್ರಂಥವೆನಿಸುವAತಹ ‘ಯಾರ ಜಪ್ತಿಗೂ ಸಿಗದ ನವಿಲುಗಳು’ 2000 ದಲ್ಲಿ ಪ್ರಕಟವಾಗಿದೆ..!

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿoದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡoತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು ತಿಳಿಸಿದ್ದಾರೆ.

ರಾಜ ಕಾಲುವೆ ಮತ್ತು ಚರಂಡಿ ಸ್ವಚ್ಛತೆಯ ಕಾರ್ಯದ ಕ್ರಿಯಾ ಯೋಜನೆ ಪ್ರಕಟ

ಗದಗ: ಗದಗ ಬೆಟಗೇರಿ ನಗರದ ವಿವಿಧ ವಾರ್ಡುಗಳಲ್ಲಿರುವ ಮಳೆಗಾಲದಲ್ಲಿ ಮಳೆ ನೀರಿನಿಂದ ತುಂಬಿ ಹರಿಯುವ ನಾಲಾ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಮುಂಜಾಗೃತಾ ಕ್ರಮವಾಗಿ ಆಡಳಿತಾಧಿಕಾರಿಗಳ ನಿರ್ದೇಶನದಂತೆ ಜೂನ್ 3 ರಂದು ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಆಯಾ ವಾರ್ಡುಗಳ ಸೂಪರ್‌ವೈಸರ್‌ಗಳ ಸಭೆ ಕರೆದು ಸಭೆಯಲ್ಲಿ ನಗರದ ಮುಖ್ಯ ನಾಲಾಗಳು ದೊಡ್ಡ ಚರಂಡಿಗಳು ಮತ್ತು ಮುಖ್ಯ ರಸ್ತೆಯ ಚರಂಡಿಗಳು ಹಾಗೂ ವಿವಿಧ ವಾರ್ಡಗಳಲ್ಲಿ ಮಳೆಯಿಂದ ತುಂಬಿ ಹರಿಯುವ ಚರಂಡಿಗಳನ್ನು ಸ್ವಚ್ಛತೆ ಮಾಡಿಸುವ ಕುರಿತು ಚರ್ಚಿಸಲಾಯಿತು.

ಪರಿಸರ ತನ್ನನ್ನು ರಕ್ಷಿಸಿಕೊಳ್ಳುತ್ತದೆ ಆದರೆ ನಾವು!?

ಪರಿಸರ ದಿನಾಚರಣೆಯನ್ನು ನಾವು ತುಂಬಾ ವಿಚಿತ್ರವಾಗಿ ಆಚರಿಸುತ್ತೇವೆ,ಈ ಕುರಿತು ಅನೇಕ ಜೋಕುಗಳು,ಟ್ರೋಲುಗಳು ಹುಟ್ಟಿಕೊಳ್ಳುವಷ್ಟು. ಆದರೆ, ಈ ವರ್ಷ ಮನುಷ್ಯ ಕೊಂಚ ಮರಗಳ ಮಹತ್ವ ಅರಿತುಕೊಂಡಿದ್ದಾನೆ. ಲಾಕ್ ಡೌನ್ ಹೊತ್ತಿನಲ್ಲಿ ಏಕಾಗ್ರತೆಯಿಂದ ಆಡುವ ಆಟವೆಂದರೆ ಕೇವಲ ಉಸಿರಾಟ ಮಾತ್ರ.

ಒತ್ತಡ ನಿವಾರಣೆಗೆ ಸಂಗೀತ

ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊoಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು.

ವಿಧಾನ ಸಭೆಯಲ್ಲಿ ಚರ್ಚಿಸಬೇಕಿದ್ದ ನೈತಿಕತೆ, ಚರ್ಚೆ ಆಗಲೇ ಇಲ್ಲ

ಮಾನವ ತನ್ನ ಜೀವನದಲ್ಲಿ ಕೆಲವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಮೌಲ್ಯ ಇಲ್ಲದ ಜೀವನ, ಜೀವನವೇ ಅಲ್ಲ. ನಂಬಿಕೆ. ವಿಶ್ವಾಸ,ತತ್ವ,ಸಿದ್ಧಾಂತ’ ನೈತಿಕತೆ, ಇವು ಮಾನವೀಯ ಮೌಲ್ಯಗಳು. ಇವುಗಳಲ್ಲಿ ಶ್ರೇಷ್ಠವಾದದ್ದು ನೈತಿಕತೆ.

ಹಾರಯಿಕೆಯ ಕವಿ ಮತ್ತು ಸಾಹಿತಿ : ಪ್ರೊ.ವಸಂತ ಕುಷ್ಟಗಿಯವರು..!

ಪ್ರೊ.ವಸಂತ ಕುಷ್ಟಗಿಯವರು ತೀರಿದ್ದಾರೆ. ಅವರ ಸಾವಿಗೆ ಕಂಬನಿ ಮಿಡಿಯುತ್ತ ಈ ನೆನಪು ಮಾಡಿಕೊಳ್ಳೋಣ. ಸದ್ಯ ಕಲಬುರ್ಗಿ ನಿವಾಸಿಯಾಗಿದ್ದ ಕವಿ ಮತ್ತು ಸಾಹಿತಿ ವಸಂತ ಕುಷ್ಟಗಿ ಅವರು ಮೂಲತಃ ಹಿಂದಿನ ರಾಯಚೂರು ಜಿಲ್ಲೆ ಕುಷ್ಟಗಿಯವರು. ವಸಂತ ಕುಷ್ಟಗಿ ಅವರು ಜನಿಸಿದ್ದು 1936 ಅಕ್ಟೋಬರ್ 10ರಂದು. ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದ ಅವರು ಪ್ರವೃತ್ತಿಯಿಂದ ಕವಿ-ಲೇಖಕರಾಗಿದ್ದರು.

ಇಂಧನ ಬೆಲೆ ಮತ್ತು ಹಣದ ಮೌಲ್ಯ ಒಂದೇ ನಾಣ್ಯದ ಮುಖಗಳು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಇಂಧನ ದರ ಏರಿಕೆ ಆರಂಭಗೊAಡಿದೆ. ಯಾವುದೇ ಚುನಾವಣೆ ನಂತರ ಇಂಧನ ಬೆಲೆ ಏರಿಸುವದು ಸಾಮಾನ್ಯ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ, ಹಲವು ದಶಕಗಳ ಸಂಪ್ರದಾಯ ಈಗಲೂ ಅಷ್ಟೇ ಅಚ್ಚು ಕಟ್ಟಾಗಿ ಎಲ್ಲಾ ಸರ್ಕಾರಗಳು ಪಾಲಿಸುತ್ತಿವೆ.

ಕರೊನಾ ಅಲೆಯ ಮಧ್ಯೆ ರಾಜಕೀಯ ಅಲೆಯ ಅಬ್ಬರ

ದೊಡ್ಡವರಿಂದ ಹಿಡಿದು ಚಿಕ್ಕ ಮಕ್ಕಳ ವರೆಗೂ ಎಚ್ಚರಿಕೆ ಗಂಟೆಯನ್ನು ಬಾರಿಸಿರುವ ಕರೊನಾ ಎರಡನೆಯ ಅಲೆಯು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದೆಯಾದರೂ ಫಂಗಸ್‌ನ (ಶಿಲೀಂಧ್ರ) ಕಾಟ ಮಾತ್ರ ಮುಂದುವರಿಯುತ್ತಲೇ ಇದೆ. ಸದ್ಯ ಲಭ್ಯವಿರುವ ಲಿಪೊಸೊಮಲ್ ಆಂಪೊಟೆರಿಸಿನ್ ಬಿ ಔಷಧವನ್ನು ಕಪ್ಪು ಶಿಲೀಂಧ್ರ ಸೋಂಕಿಗೆ ಒಳಗಾದವರಿಗೆ ನೀಡಲಾಗುತ್ತಿದೆ.

ಪಿ.ಲಂಕೇಶ್ ರ ಶೋಧ ಸಾರಾ ಅಬೂಬಕರ್..!

ಆ ಕಾಲದಲ್ಲಿ ಮುಸ್ಲಿಂ ಬರಹಗಾರರಿಗೆ ಒಂದು ಬರಹದ ಪ್ರೋತ್ಸಾಹವಿರಲಿಲ್ಲ. ಆಗ ಸಾ.ರಾ ಅಬೂಬಕರ್ ರ ಬರಹದ ಪ್ರೋತ್ಸಾಹಕ್ಕೆ ಬಂದವರು ಪಿ.ಲಂಕೇಶ್‌ರು. ಹಾಗಾಗಿ ಸಾ.ರಾ.ಅಬೂಬಕರ್‌ರ ಮೊದಲ ಗುರುಗಳು ಪಿ.ಲಂಕೇಶ್‌ರು ಅಂದರೆ ಅಡ್ಡಿಯಿಲ್ಲ. ಮುಸ್ಲಿಂ ಮಹಿಳೆಯರಿಗೆ ತಮ್ಮ ಅನಿಸಿಕೆಗಳನ್ನು ಹೊರಹಾಕಲು ಪ್ರತ್ಯೇಕ ವೇದಿಕೆಗಳೇ ಇಲ್ಲದ ಕಾಲದಲ್ಲಿ, ಮುಸ್ಲಿಂ ಮಹಿಳೆಯರ ದನಿಯಾಗಿ ಸಾಹಿತ್ಯದ ಮೂಲಕ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತಿಸಿದ ಲೇಖಕಿ ಸಾ.ರಾ.ಅಬೂಬಕರ್ ರವರು. ಸಾ.ರಾ.ಅಬೂಬಕರ್ ಹುಟ್ಟಿದ್ದು ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮದಲ್ಲಿ.

ಬಿಸ್ಲಾಗ ನಿಂತಕಿಯ ನೆರಳಿನಾಟ

ಇದು ‘ಸುದ್ದಿ ಕಾಲ’! ಹಾಗಂದರೆ ಏನೆಂದು ತಿಳಿದಿರಬೇಕಲ್ಲವೆ? ಹೌದು ಅದೇ ‘ಸುದ್ದಿ’ ವಿಷಯ. ಕೆಟ್ಟ ಸುದ್ದಿಯ ಸುರಿಮಳೆ. ಈಗ ತಿಳಿಯಿತಲ್ಲ ಸಾವಿನ ಸುದ್ದಿ ಎಂದು? ಇತ್ತೀಚೆಗೆ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ನಮ್ಮವರು, ತಮ್ಮವರು, ಬಹಳ ಹತ್ತಿರದಿಂದ ಕಂಡವರು, ಸಣ್ಣ ವಯಸ್ಸಿನವರು, ವಯಸ್ಸಾದವರು, ಹೀಗೆ ಒಬ್ಬರಲ್ಲ ಒಬ್ಬರು ನಿತ್ಯ ನಮ್ಮನ್ನಗಲುತ್ತಿದ್ದಾರೆ. ಇದಕ್ಕೆ ಕೊನೆ ಎಂದು? ಎನ್ನುವ ಪ್ರಶ್ನೆಗೆ ಯಾರಲ್ಲೂ ಉತ್ತರವಿಲ್ಲ. ಉತ್ತರವಿಲ್ಲದ ಪ್ರಶ್ನೆಗೆ ‘ಕಾಲ’ವೇ ಉತ್ತರಿಸಬೇಕು.