ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.